ಬ್ರೇಕಿಂಗ್ ನ್ಯೂಸ್
06-12-23 10:32 pm Mangalore Correspondent ಕರಾವಳಿ
ಮಂಗಳೂರು, ಡಿ.6: ತುಳುನಾಡಿನ ಜನರು ಭಯ-ಭಕ್ತಿಯಿಂದ ನಂಬುವ ದೈವಾರಾಧನೆಯನ್ನೇ ಅಣಕಿಸುವ ರೀತಿಯಲ್ಲಿ ದೈವದ ಕೋಲ ನಡೆಸುವುದು, ದೈವದ ಪಾತ್ರಧಾರಿಯ ಮುಂಭಾಗದಲ್ಲಿ ಯುವತಿಯೊಬ್ಬಳು ಅಶ್ಲೀಲವಾಗಿ ಕುಣಿಯುವ ವಿಡಿಯೋ ವೈರಲ್ ಆಗಿದ್ದು, ಜಾಲತಾಣದಲ್ಲಿ ದೈವ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೈವದ ಕಾರಣಿಕ ತೋರಿಸುವ ಕಾಂತಾರ ಸಿನಿಮಾ ಹಿಟ್ ಆದ ಬಳಿಕ ತುಳುನಾಡಿನ ದೈವಾರಾಧನೆ ಬಗ್ಗೆ ಹೊರಗಿನ ಜನರಿಗೂ ಆಸಕ್ತಿ ಹುಟ್ಟಿತ್ತು. ಮೈಸೂರಿನಲ್ಲಿ ಕೊರಗಜ್ಜನ ಕಟ್ಟೆ ಸ್ಥಾಪನೆ ಮಾಡಿ ಕೋಲ ನಡೆಸಿದ್ದು, ಬೆಂಗಳೂರು ಭಾಗದಲ್ಲಿ ಕರಾವಳಿಯ ದೈವ ನರ್ತಕರನ್ನು ಕರೆದು ಕೋಲ ನೆರವೇರಿಸಿದ್ದು ಒಂದು ವರ್ಷದ ಹಿಂದೆಯೇ ನಡೆದಿತ್ತು. ಆದರೆ ಈ ರೀತಿ ಬೆಂಗಳೂರು, ಮೈಸೂರು, ಮಂಡ್ಯಕ್ಕೆ ಹೋಗಿ ಕೋಲ ನಡೆಸುವ ಕ್ರಮಕ್ಕೆ ಕರಾವಳಿಯಲ್ಲಿ ವಿರೋಧವೂ ಕೇಳಿಬಂದಿತ್ತು. ಇದೀಗ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕೊರಗಜ್ಜನ ಕೋಲದ ಸಂದರ್ಭದಲ್ಲಿ ಯುವಕರು ವಿಚಿತ್ರವಾಗಿ ಆವೇಶ ಬಂದವರ ರೀತಿ ವರ್ತಿಸುವುದು, ಯುವತಿಯೊಬ್ಬಳು ತನ್ನ ಎದೆಯ ಮೈಮಾಟವನ್ನು ತೋರಿಸಿ ಕುಣಿಯುವುದು, ಮತ್ತೊಬ್ಬ ಯುವತಿ ಹುಲಿ ವೇಷದ ಕುಣಿತದ ರೀತಿ ಹಾರಾಟ ನಡೆಸುವುದು ವಿಡಿಯೋದಲ್ಲಿದೆ.


ಕೊರಗಜ್ಜನ ಕೋಲದ ಪಾತ್ರಧಾರಿ ನೀರನ್ನು ಚಿಮುಕಿಸುತ್ತ ಹೋಗುತ್ತಿದ್ದರೆ, ಉದ್ದಕ್ಕೆ ನಿಂತ ಯುವಕರು ಒಬ್ಬರ ನಂತರ ಇನ್ನೊಬ್ಬರಂತೆ ಆವೇಶ ಬಂದು ವಿಚಿತ್ರವಾಗಿ ವರ್ತಿಸುತ್ತಾರೆ. ಬೆಂಗಳೂರು ಅಥವಾ ಮಂಡ್ಯ ಭಾಗದಲ್ಲಿ ನಡೆದಿರುವ ಕೋಲದ ಚಿತ್ರಣ ಇದಾಗಿದ್ದು, ವಿಡಿಯೋ ನೋಡಿದರೆ ಕರಾವಳಿಯ ದೈವ ನರ್ತಕರೇ ಇದನ್ನು ಮಾಡಿರುವಂತಿದೆ. ದೊಡ್ಡ ಮೊತ್ತಕ್ಕೆ ಕಂಟ್ರಾಕ್ಟು ಪಡೆದು ಈ ರೀತಿಯ ಕೋಲಗಳನ್ನು ತುಳುನಾಡಿನ ದೈವ ನರ್ತಕರೇ ಬೆಂಗಳೂರು ಭಾಗದಲ್ಲಿ ಮಾಡುತ್ತಿದ್ದಾರೆ ಎನ್ನುವ ಆರೋಪಗಳಿದ್ದವು. ಈಗ ಹೊರಬಂದಿರುವ ವಿಡಿಯೋ ಅದಕ್ಕೆ ಸಾಕ್ಷಿಯಾಗಿ ಕಂಡುಬರುತ್ತಿದ್ದು, ದೈವಗಳಿಗೆ ಇಂತಹ ಸ್ಥಿತಿಯಾದರೆ ಹೇಗೆ ಎನ್ನುವ ಪ್ರಶ್ನೆಗಳನ್ನು ಜನರು ಮುಂದಿಡುತ್ತಿದ್ದಾರೆ.

ಕಾಂತಾರದ ಪಂಜುರ್ಲಿ ಮಾದರಿಯ ಚಿತ್ರಣದ ಮುಂದೆ ಯುವತಿಯೊಬ್ಬಳು ವಿಕೃತ ಮತ್ತು ಅಶ್ಲೀಲವಾಗಿ ಕುಣಿದಿದ್ದು, ಅದನ್ನು ಒಬ್ಬಾತ ಹತ್ತಿರದಿಂದಲೇ ಶೂಟ್ ಮಾಡಿದ್ದಾನೆ. ಕಾಲೇಜಿನ ವೇದಿಕೆಯಲ್ಲಿ ನಡೆದಿರುವ ಚಿತ್ರಣವೋ ಗೊತ್ತಿಲ್ಲ. ದೈವಗಳನ್ನು ಅಣಕಿಸುವ ರೀತಿ ಆಕೆಯ ವರ್ತನೆ ಇದೆ. ಈ ಬಗ್ಗೆ ತುಳುನಾಡಿನ ದೈವ ನರ್ತಕರು ದೂರು ಕೊಡಲು ಮುಂದಾಗಿದ್ದಾರೆ. ದೈವದ ಕೋಲ ನೆಪದಲ್ಲಿ ವಿಕೃತವಾಗಿ ವರ್ತಿಸುವುದು, ಅಶ್ಲೀಲವಾಗಿ ಕುಣಿಯುವುದು ದೈವಾರಾಧನೆ ಮತ್ತು ಭಕ್ತರ ನಂಬಿಕೆಗೆ ಮಾಡಿದ ಅವಮಾನವಾಗಿದ್ದು, ದೂರು ದಾಖಲಾದರೆ ಪೊಲೀಸರು ಕ್ರಮ ಕೈಗೊಳ್ಳಬಹುದಾಗಿದೆ.
Insult to Mangalore daiva kola video goes viral on social media. Viral videos have been critised by people over social media
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm