ಬ್ರೇಕಿಂಗ್ ನ್ಯೂಸ್
07-12-23 01:44 pm Mangalore Correspondent ಕರಾವಳಿ
ಮಂಗಳೂರು, ಡಿ.7: ಮೈನ್ಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ್ದು ಆಟೋ ರಿಕ್ಷಾ ಮತ್ತು ಬೈಕ್ ಜಖಂ ಆಗಿದ್ದಲ್ಲದೆ, ರಸ್ತೆ ಬದಿ ಕುಳಿತಿದ್ದ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮಂಗಳೂರು ಹೊರವಲಯದ ಮುಲ್ಕಿ ಪೇಟೆಯಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದ್ದು ಉಡುಪಿಯತ್ತ ತೆರಳುತ್ತಿದ್ದ ಲಾರಿ ಹೆದ್ದಾರಿ ಬಿಟ್ಟು ನೇರವಾಗಿ ಸರ್ವಿಸ್ ರಸ್ತೆಗೆ ನುಗ್ಗಿದೆ. ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಒಂದು ಆಟೋ ರಿಕ್ಷಾ ಹಾಗು ಬೈಕಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಸಂಗಪ್ಪ ಗಂಭೀರ ಗಾಯಗೊಂಡಿದ್ದಾರೆ. ಲಾಡ್ಜ್ ಒಂದರಲ್ಲಿ ವಾಚ್ಮನ್ ಆಗಿರುವ ಸಂಗಪ್ಪ ತನ್ನ ಮಗಳನ್ನು ಬಸ್ ನಿಲ್ದಾಣಕ್ಕೆ ಬಿಡಲು ಬರುತ್ತಿದ್ದರು. ಮಗಳು ಸವಿತಾ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ.


ಲಾರಿ ತಮ್ಮತ್ತ ನುಗ್ಗಿ ಬರುತ್ತಿದ್ದಾಗಲೇ ರಸ್ತೆ ಬದಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರು ಎದ್ದು ಓಡಿದ್ದಾರೆ. ಹೀಗಾಗಿ ಕೂದಲೆಳೆ ಅಂತರದಿಂದ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ.
ಲಾರಿ ಡಿಕ್ಕಿಯಾಗಿ ಆಟೋ ರಿಕ್ಷಾ ಪಲ್ಟಿಯಾಗಿ ಬಿದ್ದಿದೆ. ಅದರಲ್ಲಿದ್ದ ಪ್ರಯಾಣಿಕರಿಗೂ ಗಾಯವಾಗಿದೆ. ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಮುಂದಕ್ಕೆ ಹೋಗಿದ್ದು ಮುಲ್ಕಿ ಪೊಲೀಸರು ಬೆನ್ನತ್ತಿ ಲಾರಿ ವಶಕ್ಕೆ ಪಡೆದಿದ್ದು ಚಾಲಕನನ್ನು ಬಂಧಿಸಿದ್ದಾರೆ.
#Mangalore #Mulki truck #accident, video goes viral. Mines truck comes to service road losing control on the highway. Man and his daughter on two wheeler have said to be injured. #BREAKING_NEWS pic.twitter.com/5nQcNMOMXi
— Headline Karnataka (@hknewsonline) December 7, 2023
Mangalore Mulki truck accident, video goes viral. Mines truck comes to service road losing control on the highway. Man and his daughter on two wheeler have said to be injured.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm