ಬ್ರೇಕಿಂಗ್ ನ್ಯೂಸ್
07-12-23 03:29 pm Mangalore Correspondent ಕರಾವಳಿ
ಮಂಗಳೂರು, ಡಿ.7; ನವರಾತ್ರಿ ಸಂದರ್ಭದಲ್ಲಿ ಮಂಗಳಾದೇವಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ದೂರ ಇರಿಸಿದ್ದ ನಡೆ ಈಗ ಬೇರೆ ಕಡೆಯೂ ಮರುಕಳಿಸಿದೆ. ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಮಧ್ಯೆ ವ್ಯಾಪಾರಿಗಳು ಡಿವೈಎಫ್ಐ ನೇತೃತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಡಿ.14ರಿಂದ 19ರ ವರೆಗೆ ದೇವಸ್ಥಾನದಲ್ಲಿ ಷಷ್ಠಿ ಉತ್ಸವ ನಡೆಯಲಿದೆ. ಆದರೆ, ಉತ್ಸವದಲ್ಲಿ ವ್ಯಾಪಾರ ಮಾಡಲು ಮುಸ್ಲಿಮ್ ವ್ಯಾಪಾರಸ್ಥರು ಪೂರಕ ಪ್ರಕ್ರಿಯೆ ನಡೆಸಲು ಮುಂದಾಗಿರುವಾಗಲೇ, ಮುಸ್ಲಮರಿಗೆ ಅವಕಾಶ ನೀಡಬಾರದೆಂದು ಕೆಲವು ಸಂಘಟನೆಯವರು ಹೇಳಿದ್ದಾರೆ. ಹಾಗಾಗಿ, ನಿಮಗೆ ರಕ್ಷಣೆ ನೀಡಲು ನಮಗೆ ಸಾಧ್ಯವಿಲ್ಲ" ಎಂದು ದೇವಸ್ಥಾನ ಸಂಬಂಧಪಟ್ಟವರು ಹೇಳಿ ವ್ಯಾಪಾರ ಮಾಡದಂತೆ ಪರೋಕ್ಷ ತಡೆ ನೀಡಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಧಾರ್ಮಿಕ ತಾರತಮ್ಯ ನಡೆಯುತ್ತಿರುವುದು ಖಂಡನೀಯ. ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ಮತ್ತೆ ಜಿಲ್ಲಾಡಳಿತ ವಿಫಲವಾಗಿದೆ ಎಂದು ಡಿವೈಎಫ್ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಕೋಮುವಾದಿಗಳ ಕಪಿಮುಷ್ಟಿಯಲ್ಲಿ ನಲುಗುತ್ತಿದೆ. ಬಡ ಸಂತೆ ವ್ಯಾಪಾರಿಗಳ ಜೊತೆ ಸರಕಾರದ ನಿಂತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೂ ಕಠಿಣ ಕ್ರಮ ಕೈಗೊಳ್ಳದೆ, ಸಾಮರಸ್ಯ ಕೆಡಿಸಲು ಪರೋಕ್ಷ ಬೆಂಬಲ ನೀಡಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ವಿಫಲವಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಇಲ್ಲಿನ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Mangalore Mudipu temple, Muslim vendors not allowed for business, DYFI complaints.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm