ಬ್ರೇಕಿಂಗ್ ನ್ಯೂಸ್
07-12-23 03:29 pm Mangalore Correspondent ಕರಾವಳಿ
ಮಂಗಳೂರು, ಡಿ.7; ನವರಾತ್ರಿ ಸಂದರ್ಭದಲ್ಲಿ ಮಂಗಳಾದೇವಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ದೂರ ಇರಿಸಿದ್ದ ನಡೆ ಈಗ ಬೇರೆ ಕಡೆಯೂ ಮರುಕಳಿಸಿದೆ. ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಮಧ್ಯೆ ವ್ಯಾಪಾರಿಗಳು ಡಿವೈಎಫ್ಐ ನೇತೃತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಡಿ.14ರಿಂದ 19ರ ವರೆಗೆ ದೇವಸ್ಥಾನದಲ್ಲಿ ಷಷ್ಠಿ ಉತ್ಸವ ನಡೆಯಲಿದೆ. ಆದರೆ, ಉತ್ಸವದಲ್ಲಿ ವ್ಯಾಪಾರ ಮಾಡಲು ಮುಸ್ಲಿಮ್ ವ್ಯಾಪಾರಸ್ಥರು ಪೂರಕ ಪ್ರಕ್ರಿಯೆ ನಡೆಸಲು ಮುಂದಾಗಿರುವಾಗಲೇ, ಮುಸ್ಲಮರಿಗೆ ಅವಕಾಶ ನೀಡಬಾರದೆಂದು ಕೆಲವು ಸಂಘಟನೆಯವರು ಹೇಳಿದ್ದಾರೆ. ಹಾಗಾಗಿ, ನಿಮಗೆ ರಕ್ಷಣೆ ನೀಡಲು ನಮಗೆ ಸಾಧ್ಯವಿಲ್ಲ" ಎಂದು ದೇವಸ್ಥಾನ ಸಂಬಂಧಪಟ್ಟವರು ಹೇಳಿ ವ್ಯಾಪಾರ ಮಾಡದಂತೆ ಪರೋಕ್ಷ ತಡೆ ನೀಡಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಧಾರ್ಮಿಕ ತಾರತಮ್ಯ ನಡೆಯುತ್ತಿರುವುದು ಖಂಡನೀಯ. ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ಮತ್ತೆ ಜಿಲ್ಲಾಡಳಿತ ವಿಫಲವಾಗಿದೆ ಎಂದು ಡಿವೈಎಫ್ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಕೋಮುವಾದಿಗಳ ಕಪಿಮುಷ್ಟಿಯಲ್ಲಿ ನಲುಗುತ್ತಿದೆ. ಬಡ ಸಂತೆ ವ್ಯಾಪಾರಿಗಳ ಜೊತೆ ಸರಕಾರದ ನಿಂತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೂ ಕಠಿಣ ಕ್ರಮ ಕೈಗೊಳ್ಳದೆ, ಸಾಮರಸ್ಯ ಕೆಡಿಸಲು ಪರೋಕ್ಷ ಬೆಂಬಲ ನೀಡಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ವಿಫಲವಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಇಲ್ಲಿನ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Mangalore Mudipu temple, Muslim vendors not allowed for business, DYFI complaints.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am