ಬ್ರೇಕಿಂಗ್ ನ್ಯೂಸ್
06-08-20 01:52 pm Mangalore Reporter ಕರಾವಳಿ
ಮಂಗಳೂರು, ಆ. 6: ಕೋವಿಡ್ ನಿರ್ವಹಣೆಗೆ ಖಾಸಗೀ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ಯ೯ದ ಶೇಕಡಾ 50 ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಅವರು ಇಂದು ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋರೋನಾ ಸೋಂಕಿತರ ಚಿಕಿತ್ಸೆಗೆ ಖಾಸಗೀ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಅವರು ಸೂಚಿಸಿದರು.
ಖಾಸಗೀ ಆಸ್ಪತ್ರೆಗಳಿಗೆ ಸರಕಾರದಿಂದ ರಾಪಿಡ್ ಕಿಟ್ ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ ಎಂದು ಅವರು ತಿಳಿಸಿದರು. ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್ ಗಳನ್ನು ಸರಬರಾಜು ಮಾಡಲಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮಾತನಾಡಿ, ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಆಯುಷ್ಮಾನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋಡ್೯ ಹಾಕಿ ವಿವರ ನಮೂದಿಸಬೇಕು ಎಂದು ಸೂಚಿಸಿದರು.
ಎಲ್ಲಾ ಮೆಡಿಕಲ್ ಕಾಲೇಜುಗಳು ಪ್ರತೀ ದಿನ 100 ಮಂದಿಯ ರ್ಯಾಪಿಡ್ ಆಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕರಿಗೆ ಆಯುಷ್ಮಾನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm