ಬ್ರೇಕಿಂಗ್ ನ್ಯೂಸ್
06-08-20 01:52 pm Mangalore Reporter ಕರಾವಳಿ
ಮಂಗಳೂರು, ಆ. 6: ಕೋವಿಡ್ ನಿರ್ವಹಣೆಗೆ ಖಾಸಗೀ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ಯ೯ದ ಶೇಕಡಾ 50 ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಅವರು ಇಂದು ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋರೋನಾ ಸೋಂಕಿತರ ಚಿಕಿತ್ಸೆಗೆ ಖಾಸಗೀ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಅವರು ಸೂಚಿಸಿದರು.
ಖಾಸಗೀ ಆಸ್ಪತ್ರೆಗಳಿಗೆ ಸರಕಾರದಿಂದ ರಾಪಿಡ್ ಕಿಟ್ ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ ಎಂದು ಅವರು ತಿಳಿಸಿದರು. ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್ ಗಳನ್ನು ಸರಬರಾಜು ಮಾಡಲಿದೆ ಎಂದರು.
ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮಾತನಾಡಿ, ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಆಯುಷ್ಮಾನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋಡ್೯ ಹಾಕಿ ವಿವರ ನಮೂದಿಸಬೇಕು ಎಂದು ಸೂಚಿಸಿದರು.
ಎಲ್ಲಾ ಮೆಡಿಕಲ್ ಕಾಲೇಜುಗಳು ಪ್ರತೀ ದಿನ 100 ಮಂದಿಯ ರ್ಯಾಪಿಡ್ ಆಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕರಿಗೆ ಆಯುಷ್ಮಾನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.
30-07-25 06:28 pm
Bangalore Correspondent
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
Kerala Nurse Nimisha Priya: ಕೇರಳ ನರ್ಸ್ ನಿಮಿಷ...
29-07-25 01:31 pm
30-07-25 09:06 am
HK News Desk
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
30-07-25 11:05 pm
Mangalore Correspondent
Dharmasthala Second Day of Exhumation, SIT: ಶ...
30-07-25 03:00 pm
Shirur Landslide, Malayalam Film: ಶಿರೂರು ಗುಡ್...
30-07-25 09:04 am
No Evidence, Dharmasthala Burial, SIT: ಹೆಣ ಹೂ...
29-07-25 09:56 pm
Dharmasthala case, SIT Begins Excavation, Upd...
29-07-25 02:20 pm
30-07-25 10:42 pm
Bangalore Correspondent
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm