ಬ್ರೇಕಿಂಗ್ ನ್ಯೂಸ್
06-08-20 01:52 pm Mangalore Reporter ಕರಾವಳಿ
ಮಂಗಳೂರು, ಆ. 6: ಕೋವಿಡ್ ನಿರ್ವಹಣೆಗೆ ಖಾಸಗೀ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ಯ೯ದ ಶೇಕಡಾ 50 ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಅವರು ಇಂದು ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋರೋನಾ ಸೋಂಕಿತರ ಚಿಕಿತ್ಸೆಗೆ ಖಾಸಗೀ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಅವರು ಸೂಚಿಸಿದರು.
ಖಾಸಗೀ ಆಸ್ಪತ್ರೆಗಳಿಗೆ ಸರಕಾರದಿಂದ ರಾಪಿಡ್ ಕಿಟ್ ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ ಎಂದು ಅವರು ತಿಳಿಸಿದರು. ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್ ಗಳನ್ನು ಸರಬರಾಜು ಮಾಡಲಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮಾತನಾಡಿ, ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಆಯುಷ್ಮಾನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋಡ್೯ ಹಾಕಿ ವಿವರ ನಮೂದಿಸಬೇಕು ಎಂದು ಸೂಚಿಸಿದರು.
ಎಲ್ಲಾ ಮೆಡಿಕಲ್ ಕಾಲೇಜುಗಳು ಪ್ರತೀ ದಿನ 100 ಮಂದಿಯ ರ್ಯಾಪಿಡ್ ಆಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕರಿಗೆ ಆಯುಷ್ಮಾನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm