ಬ್ರೇಕಿಂಗ್ ನ್ಯೂಸ್
06-08-20 01:52 pm Mangalore Reporter ಕರಾವಳಿ
ಮಂಗಳೂರು, ಆ. 6: ಕೋವಿಡ್ ನಿರ್ವಹಣೆಗೆ ಖಾಸಗೀ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮಥ್ಯ೯ದ ಶೇಕಡಾ 50 ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಅವರು ಇಂದು ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋರೋನಾ ಸೋಂಕಿತರ ಚಿಕಿತ್ಸೆಗೆ ಖಾಸಗೀ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಅವರು ಸೂಚಿಸಿದರು.
ಖಾಸಗೀ ಆಸ್ಪತ್ರೆಗಳಿಗೆ ಸರಕಾರದಿಂದ ರಾಪಿಡ್ ಕಿಟ್ ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ ಎಂದು ಅವರು ತಿಳಿಸಿದರು. ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್ ಗಳನ್ನು ಸರಬರಾಜು ಮಾಡಲಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮಾತನಾಡಿ, ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಆಯುಷ್ಮಾನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋಡ್೯ ಹಾಕಿ ವಿವರ ನಮೂದಿಸಬೇಕು ಎಂದು ಸೂಚಿಸಿದರು.
ಎಲ್ಲಾ ಮೆಡಿಕಲ್ ಕಾಲೇಜುಗಳು ಪ್ರತೀ ದಿನ 100 ಮಂದಿಯ ರ್ಯಾಪಿಡ್ ಆಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕರಿಗೆ ಆಯುಷ್ಮಾನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm