ಬ್ರೇಕಿಂಗ್ ನ್ಯೂಸ್
08-12-23 04:48 pm Udupi Correspondent ಕರಾವಳಿ
ಉಡುಪಿ, ಡಿ.08: ದೇಶಾದ್ಯಂತ ಹೃದಯಾಘಾತ ಒಂದೇ ಸಮನೆ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ದುರಂತ ಘಟನೆ ನಡೆದಿದೆ. ಡಾ. ಶಶಿಕಲಾ ಚಿಕಿತ್ಸೆ ನೀಡುತ್ತಿದ್ದ ವೇಳೆ ಮೃತಪಟ್ಟವರು.
ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ.
ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು.
ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದರು. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಕಳೆದುಕೊಂಡರು.
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಾಕ್ಟರ್ಗೇ ಈ ರೀತಿಯಾ ಹೃದಯಾಘಾತ ಸಂಭವಿಸಿದ್ದು, ವೈದ್ಯಕೀಯ ವಲಯದಲ್ಲಿ ಆತಂಕ ಮೂಡಿಸಿದೆ.
Doctor gets heart attack on duty in Udupi. The deceased is identified as Dr Shashikala. She had retired in February 2022 but was continuing on contractual basis due to shortage of doctors. She was screening patients in the OPD.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm