ಬ್ರೇಕಿಂಗ್ ನ್ಯೂಸ್
08-12-23 06:44 pm Mangaluru Correspondent ಕರಾವಳಿ
ಮಂಗಳೂರು, ಡಿ.8: ಕೋಮು ದ್ವೇಷದ ನೆಲದಲ್ಲಿ ಸೌಹಾರ್ದ ಸಾರುವ ಮದುವೆಯೊಂದು ಸದ್ದಿಲ್ಲದೆ ನಡೆದಿದೆ. ಹಿಂದು ಯುವಕ ಮತ್ತು ಮುಸ್ಲಿಂ ಯುವತಿ ಪರಸ್ಪರ ಪ್ರೀತಿಸುತ್ತಿದ್ದವರು ಹತ್ತು ದಿನಗಳಿಂದ ನಾಪತ್ತೆಯಾಗಿದ್ದರು. ಇದೀಗ ಯುವ ಜೋಡಿ ಮದುವೆಯಾಗಿ ಪ್ರತ್ಷಕ್ಷರಾಗಿದ್ದು ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಕಾಟಿಪಳ್ಳದ ನಿವಾಸಿಗಳಾಗಿರುವ ಯುವಕ – ಯುವತಿ ಹತ್ತು ದಿನಗಳಿಂದ ನಾಪತ್ತೆಯಾಗಿದ್ದರು. ಇವರು ಮದುವೆಯಾಗಿರುವ ಸುದ್ದಿಯನ್ನು ಮಂಗಳೂರಿನ ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಹಾಕ್ಕೊಂಡಿದ್ದು ಆಯೆಷಾ ಎಂಬ ಮುಸ್ಲಿಂ ಯುವತಿ ಅಕ್ಷತಾ ಎಂದು ಬದಲಾಗಿರುವುದನ್ನು ಹೇಳಿಕೊಂಡಿದ್ದಾರೆ. ಯುವತಿಯ ಕುಟುಂಬ ಕಾರವಾರ ಮೂಲದವರಾಗಿದ್ದು, ತಂದೆ, ತಾಯಿ ಕಾಟಿಪಳ್ಳದಲ್ಲಿಯೇ ಹಲವು ವರ್ಷಗಳಿಂದ ನೆಲೆಸಿದ್ದರು. ಈ ನಡುವೆ, ಇಬ್ಬರ ನಡುವೆ ಪ್ರೀತಿ ಬೆಳೆದಿದ್ದರೂ ಮದುವೆಗೆ ಧರ್ಮ ಅಡ್ಡಿಯಾಗಿತ್ತು. ಶರಣ್ ಪಂಪ್ವೆಲ್ ತನ್ನ ಫೇಸ್ಬುಕ್ ಪೇಜ್ ನಲ್ಲಿ ಇಬ್ಬರ ಫೋಟೋ ಹಾಕಿ ಮದುವೆ ಬಗ್ಗೆ ಟಾಂ ಟಾಂ ಮಾಡಿದ್ದಕ್ಕೆ ಟೀಕೆಯೂ ಕೇಳಿಬಂದಿದೆ.


ಹುಡುಗ ಪ್ರಶಾಂತ್ ಬಜರಂಗದಳ ಕಾರ್ಯಕರ್ತನಾಗಿದ್ದು, ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದಾನೆ. ಕಾರ್ಯಕರ್ತನ ಕೆಲಸಕ್ಕೆ ಬಜರಂಗದಳ ಕಡೆಯಿಂದ ಶಹಭಾಸ್ ಗಿರಿ ಸಿಕ್ಕಿದ್ದರೆ, ಹುಡುಗ- ಹುಡುಗಿಯ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ಜಾಲತಾಣದಲ್ಲಿ ಪರ- ವಿರೋಧ ಚರ್ಚೆಗೆ ಗ್ರಾಸವಾಗಿದೆ. ಯುವಕನ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಮತ್ತಿತರ ಕೇಸುಗಳಿದ್ದು, ರೌಡಿ ಲಿಸ್ಟ್ ನಲ್ಲಿಯೂ ಇದ್ದಾನೆ.
ಮುಸ್ಲಿಂ ಯುವಕರು ಹಿಂದು ಯುವತಿಯನ್ನು ಮದುವೆಯಾಗಿ ಅರ್ಧದಲ್ಲಿ ಕೈಬಿಟ್ಟು ಹೋಗುವುದನ್ನು ಬಜರಂಗದಳ ಲವ್ ಜಿಹಾದ್ ಕೃತ್ಯ ಎಂದು ಜರೆಯುತ್ತಿದ್ದರೆ, ಒಳ್ಳೆಯ ರೀತಿಯಲ್ಲಿ ನೋಡಿಕೊಂಡ ಮುಸ್ಲಿಮರೂ ನಮ್ಮ ಸಮಾಜದಲ್ಲಿದ್ದಾರೆ. ಇದೇ ವೇಳೆ, ಹಿಂದು ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾಗಿ ಒಳ್ಳೆಯ ರೀತಿಯಲ್ಲೇ ನೋಡಿಕೊಂಡರೆ ಆ ರೀತಿಯ ಹಣೆಪಟ್ಟಿ ಬರಲಿಕ್ಕಿಲ್ಲ.
Hindu Muslim Marriage Mangalore, Bajrang dal activist marries Muslim girl from Surathkal in Magalore. Sharan Pumpwell share images of both couple which has sparked controversy on social media.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm