ಬ್ರೇಕಿಂಗ್ ನ್ಯೂಸ್
09-12-23 11:37 am Mangalore Correspondent ಕರಾವಳಿ
ಮಂಗಳೂರು, ಡಿ.9: ಶಿರಸಿ ತಾಲೂಕಿನ ಬಂಡಲ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮದುವೆ ಸಮಾರಂಭಕ್ಕೆ ಹೊರಟಿದ್ದ ಮಂಗಳೂರಿನ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಮಂಗಳೂರು ಕಿನ್ನಿಕಂಬಳ ಸಮೀಪದ ಕಂದಾವರ ನಿವಾಸಿ ರಾಮಕೃಷ್ಣ ರಾವ್(71), ಅವರ ಪತ್ನಿ ವಿದ್ಯಾಲಕ್ಷ್ಮೀ(67), ಪುಷ್ಪಾ ಮೋಹನ್ ರಾವ್(62), ಸುಹಾಸ ರಾವ್(30) ಹಾಗೂ ಕಾರು ಚಾಲಕ ಮೂಲತಃ ಸುರತ್ಕಲ್ ನಿವಾಸಿ, ಸದ್ಯ ಚೆನ್ನೈನಲ್ಲಿ ವೈದ್ಯರಾಗಿರುವ ಅರವಿಂದ(38) ಮೃತಪಟ್ಟವರು.


ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ರಾಮಕೃಷ್ಣ ರಾವ್ ಅವರ ತಮ್ಮನ ಸೊಸೆಯ ಅಣ್ಣನ ಮಗನ ಮದುವೆ ಇತ್ತು. ಮದುವೆ ಕಾರ್ಯಕ್ಕೆ ಕುಟುಂಬಸ್ಥರು ತೆರಳುತ್ತಿದ್ದಾಗ ಕುಮಟಾ- ಶಿರಸಿ ಮಾರ್ಗದಲ್ಲಿ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಕಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ದೇಹಗಳು ಅದರೊಳಗೆ ಸಿಲುಕಿಕೊಂಡಿದ್ದವು. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಗೆ ಒಯ್ಯುವ ಮಧ್ಯೆ ಕೊನೆಯುಸಿರೆಳೆದಿದ್ದರು.


ಮದುವೆಗೆ ತೆರಳಿದ ಕುಟುಂಬ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಕಂದಾವರ ಗ್ರಾಮದಲ್ಲಿ ಶೋಕ ಸಾಗರವೇ ನೆಲೆಸಿತ್ತು. ಮನೆಮಂದಿಯಲ್ಲಿ ಆಕ್ರಂದನ ಮುಗಿಲು ಮುಟ್ಟಿತ್ತು. ಸಂಭ್ರಮ ನೆಲೆಸಿದ್ದ ಮನೆಯಲ್ಲಿ ಸೂತಕ ಮನೆಮಾಡಿತ್ತು. ರಾಮಕೃಷ್ಣ ರಾವ್ – ವಿದ್ಯಾಲಕ್ಷ್ಮಿ ದಂಪತಿಗೆ ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ. ಪುತ್ರಿಯರಿಗೆ ಮದುವೆಯಾಗಿದ್ದು ಪುತ್ರ ವಕೀಲ ಕಂದಾವರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೂ ಆಗಿದ್ದಾರೆ. ಮೃತ ಪುಷ್ಪಾ ಮೋಹನ್ ರಾವ್ ಅವರು ರಾಮಕೃಷ್ಣ ರಾವ್ ಅವರ ತಮ್ಮನ ಪತ್ನಿ. ರಾಮಕೃಷ್ಣ ಅವರು ಕಿನ್ನಿಕಂಬಳ ರಾಧಾಕೃಷ್ಣ ಭಜನಾ ಮಂದಿರದ ಅರ್ಚಕರಾಗಿದ್ದು ಗುರುಪುರ ಕೈಕಂಬದಲ್ಲಿ ರಿಕ್ಷಾ ಚಾಲಕರಾಗಿದ್ದರು. ಜೊತೆಗೆ ಭಜನೆ, ನಗರ ಸಂಕೀರ್ತನೆ, ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು.
ಮೃತ ಸುಹಾಸ ರಾವ್ ಅವರು ರಾಮಕೃಷ್ಣರ ತಮ್ಮನ ಮಗನಾಗಿದ್ದು, ಇನ್ಫೋಸಿಸ್ ಸಂಸ್ಥೆಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದಾರೆ. ಕಾರು ಚಲಾಯಿಸುತ್ತಿದ್ದ ಮೂಲತಃ ಸುರತ್ಕಲ್ ನಿವಾಸಿಯಾಗಿರುವ ಅರವಿಂದ್, ಸುಹಾಸ್ ಅವರ ತಮ್ಮನ ಪತ್ನಿಯ ಅಣ್ಣನಾಗಿದ್ದು, ಚೆನ್ನೈಯಲ್ಲಿ ವೈದ್ಯರಾಗಿದ್ದಾರೆ.
Five members of a family from Mangalore killed in bus car accident at Sirsi uttar kannada. According to police, three of the now-deceased were car occupants hailing from Mangalore and another belonged to Tamil Nadu. While three of them died on the spot, two others succumbed to their injuries at a hospital. They were on their way to attend a wedding at Sirsi.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm