Mangalore Someshwar beach: ಸೋಮೇಶ್ವರ ಕಡಲಿಗಿಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು ; ಅನ್ನಪ್ರಸಾದ ಸ್ವೀಕರಿಸಿ ಸಮುದ್ರಕ್ಕಿಳಿದಿದ್ದ ಕುಂಜತ್ತೂರಿನ ವಿದ್ಯಾರ್ಥಿಗಳು 

09-12-23 05:44 pm       Mangaluru Correspondent   ಕರಾವಳಿ

ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಸಮುದ್ರದಲ್ಲಿ ನೀರಾಟಕ್ಕಿಳಿದ ಆರು ಮಂದಿ ಪಿಯು ವಿದ್ಯಾರ್ಥಿಗಳಲ್ಲಿ ಇಬ್ಬರು ನೀರುಪಾಲಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ‌. 

ಉಳ್ಳಾಲ, ಡಿ.9: ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಸಮುದ್ರದಲ್ಲಿ ನೀರಾಟಕ್ಕಿಳಿದ ಆರು ಮಂದಿ ಪಿಯು ವಿದ್ಯಾರ್ಥಿಗಳಲ್ಲಿ ಇಬ್ಬರು ನೀರುಪಾಲಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ‌. 

ಸೋಮೇಶ್ವರದ ಪರಿಜ್ಞಾನ ಪಿಯು ಕಾಲೇಜಿನ ದ್ವಿತೀಯ ಪಿಯು ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಸಮುದ್ರ ಪಾಲಾದವರು. 

ಶನಿವಾರ ಮಧ್ಯಾಹ್ನ ನಂತರ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಸಮೀಪದ ಕಡಲ ಕಿನಾರೆಯಲ್ಲಿ ನೀರಾಟಕ್ಕಿಳಿದಿದ್ದಾರೆ. ಈ ವೇಳೆ ಯಶ್ವಿತ್ ಮತ್ತು ಯುವರಾಜನ್ನ ಕಡಲಿನ ರಕ್ಕಸ ಅಲೆಗಳು ಎಳೆದು ಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಈಜು ತಜ್ಞರು ಭೇಟಿ ನೀಡಿದ್ದು ನೀರು ಪಾಲಾದ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Two 17 year old youths drowned at Someshwar Beach at Ullal in Mangalore While they were playing in the water. Six of the fiends had some to the temple and later as they were playing the water two from Mangalore have drowned in the sea.