ಬ್ರೇಕಿಂಗ್ ನ್ಯೂಸ್
09-12-23 07:07 pm Mangaluru Correspondent ಕರಾವಳಿ
ಮಂಗಳೂರು, ಡಿ.9: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿ ಅಧಿವೇಶನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ವಿಶೇಷ ಗಮನ ಸೆಳೆದರು.
ಈಗಾಗಲೇ ದುಬಾರಿ ದರದಿಂದಾಗಿ ಜನಸಾಮಾನ್ಯರಿಗೆ ಮರಳು ಕೈಗೆಟುಕದಿದ್ದು, ಇನ್ನೂ ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಕಟ್ಟಡ ನಿರ್ಮಾಣ ಚಟುವಟಿಕೆಗಳು ಸ್ಥಗಿತಗೊಳ್ಳುವ ಆತಂಕವಿದೆ. ಇದನ್ನೇ ನಂಬಿ ಬದುಕು ನಡೆಸುವ ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಲಿರುವ ಬಗ್ಗೆ, ಆರ್ಥಿಕವಾಗಿ ಜಿಲ್ಲೆಗೆ ನಷ್ಟ ಉಂಟಾಗುವ ಬಗ್ಗೆ ಹಾಗೂ ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಮರಳಿನ ಸಮಸ್ಯೆ ಕುರಿತು ಶಾಸಕ ಕಾಮತ್ ಸದನದ ಗಮನ ಸೆಳೆದರು.
ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿದ್ದು ಅದನ್ನು ಮರಳಿ ಆರಂಭಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಏಳು ಜನ ಸದಸ್ಯರನ್ನೊಳಗೊಂಡ ಸಮಿತಿ, ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಸಂಪೂರ್ಣ ವರದಿಯನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಆದರೆ ಇಲ್ಲಿಯವರೆಗೆ ಅನುಮತಿ ದೊರೆತಿಲ್ಲ.
ಸದ್ಯ ಜಿಲ್ಲೆಯಲ್ಲಿ ಯಾವುದೇ ಕಾಮಗಾರಿಗೂ ಸಿಆರ್ಝಡ್ ಮರಳು ಲಭ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದರೆ ಮತ್ತೆ ಹಲವು ತಿಂಗಳ ಕಾಲ ಮರಳು ಸಿಗದೇ ತೀವ್ರ ಸಂಕಷ್ಟ ಅನುಭವಿಸಬೇಕಾಗುವ ಸ್ಥಿತಿ ಎದುರಾಗಲಿದೆ.
ಈಗಾಗಲೇ ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕಳುಹಿಸಲಾಗಿದ್ದರೂ ಇನ್ನೂ ಸಹ ನಿರಾಕ್ಷೇಪಣಾ (EC) ಪತ್ರ ನೀಡದೇ ಅನಗತ್ಯ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಎಂ ಸ್ಯಾಂಡನ್ನು ರಸ್ತೆ ಅಥವಾ ಇನ್ನಿತರ ಉಪಯೋಗಗಳಿಗಾಗಿ ಮಾತ್ರ ಬಳಸಲಾಗುತ್ತದೆ, ಹೊರತು ಮನೆಗಳ ಕಟ್ಟಡಕ್ಕೆ ಹೆಚ್ಚು ಉಪಯೋಗಿಸುವುದಿಲ್ಲ. ಇದು ಸಭಾಧ್ಯಕ್ಷರಿಗೂ ತಿಳಿದಿರುವ ವಿಚಾರ. ಹಾಗಾಗಿ ಕೂಡಲೇ ನಿರಾಕ್ಷೇಪಣಾ (EC) ಪತ್ರ ನೀಡಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.
MLA Vedavyas kamath talks about sand issue of Mangalore in Assembly
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm