ಬ್ರೇಕಿಂಗ್ ನ್ಯೂಸ್
09-12-23 07:07 pm Mangaluru Correspondent ಕರಾವಳಿ
ಮಂಗಳೂರು, ಡಿ.9: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿ ಅಧಿವೇಶನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ವಿಶೇಷ ಗಮನ ಸೆಳೆದರು.
ಈಗಾಗಲೇ ದುಬಾರಿ ದರದಿಂದಾಗಿ ಜನಸಾಮಾನ್ಯರಿಗೆ ಮರಳು ಕೈಗೆಟುಕದಿದ್ದು, ಇನ್ನೂ ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಕಟ್ಟಡ ನಿರ್ಮಾಣ ಚಟುವಟಿಕೆಗಳು ಸ್ಥಗಿತಗೊಳ್ಳುವ ಆತಂಕವಿದೆ. ಇದನ್ನೇ ನಂಬಿ ಬದುಕು ನಡೆಸುವ ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಲಿರುವ ಬಗ್ಗೆ, ಆರ್ಥಿಕವಾಗಿ ಜಿಲ್ಲೆಗೆ ನಷ್ಟ ಉಂಟಾಗುವ ಬಗ್ಗೆ ಹಾಗೂ ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಮರಳಿನ ಸಮಸ್ಯೆ ಕುರಿತು ಶಾಸಕ ಕಾಮತ್ ಸದನದ ಗಮನ ಸೆಳೆದರು.
ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿದ್ದು ಅದನ್ನು ಮರಳಿ ಆರಂಭಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಏಳು ಜನ ಸದಸ್ಯರನ್ನೊಳಗೊಂಡ ಸಮಿತಿ, ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಸಂಪೂರ್ಣ ವರದಿಯನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಆದರೆ ಇಲ್ಲಿಯವರೆಗೆ ಅನುಮತಿ ದೊರೆತಿಲ್ಲ.
ಸದ್ಯ ಜಿಲ್ಲೆಯಲ್ಲಿ ಯಾವುದೇ ಕಾಮಗಾರಿಗೂ ಸಿಆರ್ಝಡ್ ಮರಳು ಲಭ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದರೆ ಮತ್ತೆ ಹಲವು ತಿಂಗಳ ಕಾಲ ಮರಳು ಸಿಗದೇ ತೀವ್ರ ಸಂಕಷ್ಟ ಅನುಭವಿಸಬೇಕಾಗುವ ಸ್ಥಿತಿ ಎದುರಾಗಲಿದೆ.
ಈಗಾಗಲೇ ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕಳುಹಿಸಲಾಗಿದ್ದರೂ ಇನ್ನೂ ಸಹ ನಿರಾಕ್ಷೇಪಣಾ (EC) ಪತ್ರ ನೀಡದೇ ಅನಗತ್ಯ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಎಂ ಸ್ಯಾಂಡನ್ನು ರಸ್ತೆ ಅಥವಾ ಇನ್ನಿತರ ಉಪಯೋಗಗಳಿಗಾಗಿ ಮಾತ್ರ ಬಳಸಲಾಗುತ್ತದೆ, ಹೊರತು ಮನೆಗಳ ಕಟ್ಟಡಕ್ಕೆ ಹೆಚ್ಚು ಉಪಯೋಗಿಸುವುದಿಲ್ಲ. ಇದು ಸಭಾಧ್ಯಕ್ಷರಿಗೂ ತಿಳಿದಿರುವ ವಿಚಾರ. ಹಾಗಾಗಿ ಕೂಡಲೇ ನಿರಾಕ್ಷೇಪಣಾ (EC) ಪತ್ರ ನೀಡಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.
MLA Vedavyas kamath talks about sand issue of Mangalore in Assembly
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm