ಬ್ರೇಕಿಂಗ್ ನ್ಯೂಸ್
09-12-23 07:07 pm Mangaluru Correspondent ಕರಾವಳಿ
ಮಂಗಳೂರು, ಡಿ.9: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿ ಅಧಿವೇಶನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ವಿಶೇಷ ಗಮನ ಸೆಳೆದರು.
ಈಗಾಗಲೇ ದುಬಾರಿ ದರದಿಂದಾಗಿ ಜನಸಾಮಾನ್ಯರಿಗೆ ಮರಳು ಕೈಗೆಟುಕದಿದ್ದು, ಇನ್ನೂ ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಕಟ್ಟಡ ನಿರ್ಮಾಣ ಚಟುವಟಿಕೆಗಳು ಸ್ಥಗಿತಗೊಳ್ಳುವ ಆತಂಕವಿದೆ. ಇದನ್ನೇ ನಂಬಿ ಬದುಕು ನಡೆಸುವ ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಲಿರುವ ಬಗ್ಗೆ, ಆರ್ಥಿಕವಾಗಿ ಜಿಲ್ಲೆಗೆ ನಷ್ಟ ಉಂಟಾಗುವ ಬಗ್ಗೆ ಹಾಗೂ ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಮರಳಿನ ಸಮಸ್ಯೆ ಕುರಿತು ಶಾಸಕ ಕಾಮತ್ ಸದನದ ಗಮನ ಸೆಳೆದರು.
ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿದ್ದು ಅದನ್ನು ಮರಳಿ ಆರಂಭಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಏಳು ಜನ ಸದಸ್ಯರನ್ನೊಳಗೊಂಡ ಸಮಿತಿ, ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಸಂಪೂರ್ಣ ವರದಿಯನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಆದರೆ ಇಲ್ಲಿಯವರೆಗೆ ಅನುಮತಿ ದೊರೆತಿಲ್ಲ.
ಸದ್ಯ ಜಿಲ್ಲೆಯಲ್ಲಿ ಯಾವುದೇ ಕಾಮಗಾರಿಗೂ ಸಿಆರ್ಝಡ್ ಮರಳು ಲಭ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದರೆ ಮತ್ತೆ ಹಲವು ತಿಂಗಳ ಕಾಲ ಮರಳು ಸಿಗದೇ ತೀವ್ರ ಸಂಕಷ್ಟ ಅನುಭವಿಸಬೇಕಾಗುವ ಸ್ಥಿತಿ ಎದುರಾಗಲಿದೆ.
ಈಗಾಗಲೇ ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕಳುಹಿಸಲಾಗಿದ್ದರೂ ಇನ್ನೂ ಸಹ ನಿರಾಕ್ಷೇಪಣಾ (EC) ಪತ್ರ ನೀಡದೇ ಅನಗತ್ಯ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಎಂ ಸ್ಯಾಂಡನ್ನು ರಸ್ತೆ ಅಥವಾ ಇನ್ನಿತರ ಉಪಯೋಗಗಳಿಗಾಗಿ ಮಾತ್ರ ಬಳಸಲಾಗುತ್ತದೆ, ಹೊರತು ಮನೆಗಳ ಕಟ್ಟಡಕ್ಕೆ ಹೆಚ್ಚು ಉಪಯೋಗಿಸುವುದಿಲ್ಲ. ಇದು ಸಭಾಧ್ಯಕ್ಷರಿಗೂ ತಿಳಿದಿರುವ ವಿಚಾರ. ಹಾಗಾಗಿ ಕೂಡಲೇ ನಿರಾಕ್ಷೇಪಣಾ (EC) ಪತ್ರ ನೀಡಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.
MLA Vedavyas kamath talks about sand issue of Mangalore in Assembly
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm