ಬ್ರೇಕಿಂಗ್ ನ್ಯೂಸ್
09-12-23 10:41 pm Mangaluru correspondent ಕರಾವಳಿ
ಮಂಗಳೂರು, ಡಿ.9: ಶ್ಯಾಕ್ಸ್ ಎಂಟರ್ಪ್ರೈಸಸ್ನ ಅಬ್ದುಲ್ ಶಕೀಲ್ ನಿರ್ಮಾಣದ ಬ್ಯಾರಿ ಭಾಷೆಯ ಚಲನಚಿತ್ರ ‘ಮುಸಾಫಿರ್’ಗೆ ‘ಕರ್ನಾಟಕ ನಂದಿ ಫಿಲ್ಮ್ -2023’ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ‘ಮುಸಾಫಿರ್’ ಸಿನೆಮಾದ ಮುಖ್ಯ ಪಾತ್ರಧಾರಿ ಮುಹಮ್ಮದ್ ಬಡ್ಡೂರು ಅವರ ಪರವಾಗಿ ಚಲನಚಿತ್ರ ನಿರ್ದೇಶಕ ಅಂಬಳಿಕೆ ರವಿ ಹಾಗೂ ‘ಮುಸಾಫಿರ್’ ಸಿನೆಮಾಕ್ಕೆ ಸಾಹಿತ್ಯ ಬರೆದ ಪತ್ರಕರ್ತ ಹಂಝ ಮಲಾರ್ ಅವರು ‘ಕಾಂತಾರ’ ಸಿನೆಮಾದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಹಂಝ ಮಲಾರ್ ಅವರ ‘ಸೂಫಿ ಬ್ಯಾರಿಯ ಝಕಾತ್ ಯಾತ್ರೆ’ ಕಥೆ ಆಧಾರಿತ ‘ಮುಸಾಫಿರ್’ ಸಿನೆಮಾದಲ್ಲಿ ನಟಿಸಿದ್ದ ಸಾಹಿತಿ ಮುಹಮ್ಮದ್ ಬಡ್ಡೂರ್ ‘ಅಬ್ಬಾ’ ಬ್ಯಾರಿ ಸಿನೆಮಾದಲ್ಲೂ ಮುಖ್ಯ ಪಾತ್ರದಲ್ಲಿ ನಟಿಸಿದ್ದರು.
ಕನ್ನಡವಲ್ಲದೆ ತುಳು, ಬ್ಯಾರಿ, ಕೊಂಕಣಿ, ಕೊಡವ, ಬಂಜಾರದಂತಹ ರಾಜ್ಯದ ಪ್ರಾದೇಶಿಕ ಭಾಷೆಗಳ ಸಿನೆಮಾವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಚಿತ್ರನಟರಾದ ರವಿಚಂದ್ರನ್, ವಿನೋದ್ ರಾಜ್, ಶ್ರೀನಾಥ್, ಧ್ರುವ ಸರ್ಜಾ, ಉಮಾಶ್ರೀ, ಅನು ಪ್ರಭಾಕರ್, ವಸಿಷ್ಠ ಸಿಂಹ, ಅನಿರುದ್ಧ, ಪ್ರೇಮಾ, ಹರಿಪ್ರಿಯಾ, ಉಲ್ಲಾಸ್ ಹಾಗೂ ಆಯೋಜಕರಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಂದಳಿಕೆ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್, ಅನಿತಾ ರೆಡ್ಡಿ, ಭಾ.ಮಾ. ಗಿರೀಶ್, ಹರ್ಷಿತಾ, ನಂದಿತಾ, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.
Musafir Beary movie bags Karnataka Nandi film award. The award was presented by Kantara Hero and director Rishab Shetty to Hamza Malar
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm