ಬ್ರೇಕಿಂಗ್ ನ್ಯೂಸ್
10-12-23 12:06 pm Mangalore Correspondent ಕರಾವಳಿ
ಉಳ್ಳಾಲ, ಡಿ.10: ಸೋಮೇಶ್ವರದಲ್ಲಿ ನಿನ್ನೆ ಮಧ್ಯಾಹ್ನ ಸಮುದ್ರ ಪಾಲಾಗಿದ್ದ ಇಬ್ಬರು ಪಿಯು ವಿದ್ಯಾರ್ಥಿಗಳ ಮೃತದೇಹಗಳು ಇಂದು ಬೆಳಗ್ಗೆ ಅದೇ ಸ್ಥಳದಲ್ಲಿ ಪತ್ತೆಯಾಗಿದೆ. ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಮೃತರು.
ನಿನ್ನೆ ಮಧ್ಯಾಹ್ನದ ಬಳಿಕ ಕಾಲೇಜಿಗೆ ರಜೆ ಇದ್ದ ಕಾರಣ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮೇಶ್ವರದ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಪಕ್ಕದ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಯಶ್ವಿತ್ ಮತ್ತು ಯುವರಾಜ್ ನೀರಾಟಕ್ಕಿಳಿದಿದ್ದು ದೈತ್ಯ ಅಲೆಗಳು ಅವರಿಬ್ಬರನ್ನು ಕೊಚ್ಚಿಕೊಂಡು ಹೋಗಿದೆ. ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಪರಿಣಿತ ಈಜುಗಾರರು ರಾತ್ರಿ ವರೆಗೂ ಶೋಧ ನಡೆಸಿದರೂ ನೀರುಪಾಲಾದ ಯುವರಾಜ್, ಯಶ್ವಿತ್ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಘಟನೆ ನಡೆದ ಸ್ಥಳದಲ್ಲೇ ವಿದ್ಯಾರ್ಥಿಗಳ ಮೃತದೇಹಗಳು ದೊರೆತಿದ್ದು ಉಳ್ಳಾಲ ಪೊಲೀಸರು ದೇರಳಕಟ್ಟೆ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.



ಮೃತ ಇಬ್ಬರು ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದು ತಂದೆ, ತಾಯಿ ಏಕೈಕ ಸಹೋದರಿಯರನ್ನ ಅಗಲಿದ್ದಾರೆ. ಸೋಮೇಶ್ವರ ಕಡಲ ಕಿನಾರೆಯಲ್ಲಿ ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಪ್ರವಾಸೋದ್ಯಮ ಇಲಾಖೆ ಇಲ್ಲಿ ಖಾಯಂ ಜೀವ ರಕ್ಷಕ ಸಿಬ್ಬಂದಿಗಳನ್ನ ನೇಮಿಸಿಲ್ಲ. ಕಡಲ ತೀರಕ್ಕೆ ಭೇಟಿ ಕೊಡುವ ಜನರು ಜಾಗರೂಕರಾಗಿರಬೇಕೆಂದು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಬಾಲಕೃಷ್ಣ ಎಚ್ಚರಿಸಿದ್ದಾರೆ.
Mangalore Two students drowned at Someshwar Beach, body found. Two students had drowned into the sea while they were playing with their friends. The body had been found now
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm