ಬ್ರೇಕಿಂಗ್ ನ್ಯೂಸ್
10-12-23 12:06 pm Mangalore Correspondent ಕರಾವಳಿ
ಉಳ್ಳಾಲ, ಡಿ.10: ಸೋಮೇಶ್ವರದಲ್ಲಿ ನಿನ್ನೆ ಮಧ್ಯಾಹ್ನ ಸಮುದ್ರ ಪಾಲಾಗಿದ್ದ ಇಬ್ಬರು ಪಿಯು ವಿದ್ಯಾರ್ಥಿಗಳ ಮೃತದೇಹಗಳು ಇಂದು ಬೆಳಗ್ಗೆ ಅದೇ ಸ್ಥಳದಲ್ಲಿ ಪತ್ತೆಯಾಗಿದೆ. ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಮೃತರು.
ನಿನ್ನೆ ಮಧ್ಯಾಹ್ನದ ಬಳಿಕ ಕಾಲೇಜಿಗೆ ರಜೆ ಇದ್ದ ಕಾರಣ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮೇಶ್ವರದ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಪಕ್ಕದ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಯಶ್ವಿತ್ ಮತ್ತು ಯುವರಾಜ್ ನೀರಾಟಕ್ಕಿಳಿದಿದ್ದು ದೈತ್ಯ ಅಲೆಗಳು ಅವರಿಬ್ಬರನ್ನು ಕೊಚ್ಚಿಕೊಂಡು ಹೋಗಿದೆ. ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಪರಿಣಿತ ಈಜುಗಾರರು ರಾತ್ರಿ ವರೆಗೂ ಶೋಧ ನಡೆಸಿದರೂ ನೀರುಪಾಲಾದ ಯುವರಾಜ್, ಯಶ್ವಿತ್ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಘಟನೆ ನಡೆದ ಸ್ಥಳದಲ್ಲೇ ವಿದ್ಯಾರ್ಥಿಗಳ ಮೃತದೇಹಗಳು ದೊರೆತಿದ್ದು ಉಳ್ಳಾಲ ಪೊಲೀಸರು ದೇರಳಕಟ್ಟೆ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.



ಮೃತ ಇಬ್ಬರು ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದು ತಂದೆ, ತಾಯಿ ಏಕೈಕ ಸಹೋದರಿಯರನ್ನ ಅಗಲಿದ್ದಾರೆ. ಸೋಮೇಶ್ವರ ಕಡಲ ಕಿನಾರೆಯಲ್ಲಿ ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಪ್ರವಾಸೋದ್ಯಮ ಇಲಾಖೆ ಇಲ್ಲಿ ಖಾಯಂ ಜೀವ ರಕ್ಷಕ ಸಿಬ್ಬಂದಿಗಳನ್ನ ನೇಮಿಸಿಲ್ಲ. ಕಡಲ ತೀರಕ್ಕೆ ಭೇಟಿ ಕೊಡುವ ಜನರು ಜಾಗರೂಕರಾಗಿರಬೇಕೆಂದು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಬಾಲಕೃಷ್ಣ ಎಚ್ಚರಿಸಿದ್ದಾರೆ.
Mangalore Two students drowned at Someshwar Beach, body found. Two students had drowned into the sea while they were playing with their friends. The body had been found now
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm