ಬ್ರೇಕಿಂಗ್ ನ್ಯೂಸ್
10-12-23 12:06 pm Mangalore Correspondent ಕರಾವಳಿ
ಉಳ್ಳಾಲ, ಡಿ.10: ಸೋಮೇಶ್ವರದಲ್ಲಿ ನಿನ್ನೆ ಮಧ್ಯಾಹ್ನ ಸಮುದ್ರ ಪಾಲಾಗಿದ್ದ ಇಬ್ಬರು ಪಿಯು ವಿದ್ಯಾರ್ಥಿಗಳ ಮೃತದೇಹಗಳು ಇಂದು ಬೆಳಗ್ಗೆ ಅದೇ ಸ್ಥಳದಲ್ಲಿ ಪತ್ತೆಯಾಗಿದೆ. ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಮೃತರು.
ನಿನ್ನೆ ಮಧ್ಯಾಹ್ನದ ಬಳಿಕ ಕಾಲೇಜಿಗೆ ರಜೆ ಇದ್ದ ಕಾರಣ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮೇಶ್ವರದ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಪಕ್ಕದ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಯಶ್ವಿತ್ ಮತ್ತು ಯುವರಾಜ್ ನೀರಾಟಕ್ಕಿಳಿದಿದ್ದು ದೈತ್ಯ ಅಲೆಗಳು ಅವರಿಬ್ಬರನ್ನು ಕೊಚ್ಚಿಕೊಂಡು ಹೋಗಿದೆ. ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಪರಿಣಿತ ಈಜುಗಾರರು ರಾತ್ರಿ ವರೆಗೂ ಶೋಧ ನಡೆಸಿದರೂ ನೀರುಪಾಲಾದ ಯುವರಾಜ್, ಯಶ್ವಿತ್ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಘಟನೆ ನಡೆದ ಸ್ಥಳದಲ್ಲೇ ವಿದ್ಯಾರ್ಥಿಗಳ ಮೃತದೇಹಗಳು ದೊರೆತಿದ್ದು ಉಳ್ಳಾಲ ಪೊಲೀಸರು ದೇರಳಕಟ್ಟೆ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.



ಮೃತ ಇಬ್ಬರು ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದು ತಂದೆ, ತಾಯಿ ಏಕೈಕ ಸಹೋದರಿಯರನ್ನ ಅಗಲಿದ್ದಾರೆ. ಸೋಮೇಶ್ವರ ಕಡಲ ಕಿನಾರೆಯಲ್ಲಿ ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಪ್ರವಾಸೋದ್ಯಮ ಇಲಾಖೆ ಇಲ್ಲಿ ಖಾಯಂ ಜೀವ ರಕ್ಷಕ ಸಿಬ್ಬಂದಿಗಳನ್ನ ನೇಮಿಸಿಲ್ಲ. ಕಡಲ ತೀರಕ್ಕೆ ಭೇಟಿ ಕೊಡುವ ಜನರು ಜಾಗರೂಕರಾಗಿರಬೇಕೆಂದು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಬಾಲಕೃಷ್ಣ ಎಚ್ಚರಿಸಿದ್ದಾರೆ.
Mangalore Two students drowned at Someshwar Beach, body found. Two students had drowned into the sea while they were playing with their friends. The body had been found now
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm