ಬ್ರೇಕಿಂಗ್ ನ್ಯೂಸ್
10-12-23 12:06 pm Mangalore Correspondent ಕರಾವಳಿ
ಉಳ್ಳಾಲ, ಡಿ.10: ಸೋಮೇಶ್ವರದಲ್ಲಿ ನಿನ್ನೆ ಮಧ್ಯಾಹ್ನ ಸಮುದ್ರ ಪಾಲಾಗಿದ್ದ ಇಬ್ಬರು ಪಿಯು ವಿದ್ಯಾರ್ಥಿಗಳ ಮೃತದೇಹಗಳು ಇಂದು ಬೆಳಗ್ಗೆ ಅದೇ ಸ್ಥಳದಲ್ಲಿ ಪತ್ತೆಯಾಗಿದೆ. ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಮೃತರು.
ನಿನ್ನೆ ಮಧ್ಯಾಹ್ನದ ಬಳಿಕ ಕಾಲೇಜಿಗೆ ರಜೆ ಇದ್ದ ಕಾರಣ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮೇಶ್ವರದ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಪಕ್ಕದ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಯಶ್ವಿತ್ ಮತ್ತು ಯುವರಾಜ್ ನೀರಾಟಕ್ಕಿಳಿದಿದ್ದು ದೈತ್ಯ ಅಲೆಗಳು ಅವರಿಬ್ಬರನ್ನು ಕೊಚ್ಚಿಕೊಂಡು ಹೋಗಿದೆ. ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಪರಿಣಿತ ಈಜುಗಾರರು ರಾತ್ರಿ ವರೆಗೂ ಶೋಧ ನಡೆಸಿದರೂ ನೀರುಪಾಲಾದ ಯುವರಾಜ್, ಯಶ್ವಿತ್ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಘಟನೆ ನಡೆದ ಸ್ಥಳದಲ್ಲೇ ವಿದ್ಯಾರ್ಥಿಗಳ ಮೃತದೇಹಗಳು ದೊರೆತಿದ್ದು ಉಳ್ಳಾಲ ಪೊಲೀಸರು ದೇರಳಕಟ್ಟೆ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಇಬ್ಬರು ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದು ತಂದೆ, ತಾಯಿ ಏಕೈಕ ಸಹೋದರಿಯರನ್ನ ಅಗಲಿದ್ದಾರೆ. ಸೋಮೇಶ್ವರ ಕಡಲ ಕಿನಾರೆಯಲ್ಲಿ ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಪ್ರವಾಸೋದ್ಯಮ ಇಲಾಖೆ ಇಲ್ಲಿ ಖಾಯಂ ಜೀವ ರಕ್ಷಕ ಸಿಬ್ಬಂದಿಗಳನ್ನ ನೇಮಿಸಿಲ್ಲ. ಕಡಲ ತೀರಕ್ಕೆ ಭೇಟಿ ಕೊಡುವ ಜನರು ಜಾಗರೂಕರಾಗಿರಬೇಕೆಂದು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಬಾಲಕೃಷ್ಣ ಎಚ್ಚರಿಸಿದ್ದಾರೆ.
Mangalore Two students drowned at Someshwar Beach, body found. Two students had drowned into the sea while they were playing with their friends. The body had been found now
15-04-25 08:44 pm
Bangalore Correspondent
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
15-04-25 09:57 pm
Mangalore Correspondent
Drowning, Surathkal Beach, Mangalore, News: ಮ...
15-04-25 09:21 pm
ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ...
14-04-25 09:20 pm
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm