ಬ್ರೇಕಿಂಗ್ ನ್ಯೂಸ್
10-12-23 12:06 pm Mangalore Correspondent ಕರಾವಳಿ
ಉಳ್ಳಾಲ, ಡಿ.10: ಸೋಮೇಶ್ವರದಲ್ಲಿ ನಿನ್ನೆ ಮಧ್ಯಾಹ್ನ ಸಮುದ್ರ ಪಾಲಾಗಿದ್ದ ಇಬ್ಬರು ಪಿಯು ವಿದ್ಯಾರ್ಥಿಗಳ ಮೃತದೇಹಗಳು ಇಂದು ಬೆಳಗ್ಗೆ ಅದೇ ಸ್ಥಳದಲ್ಲಿ ಪತ್ತೆಯಾಗಿದೆ. ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಮೃತರು.
ನಿನ್ನೆ ಮಧ್ಯಾಹ್ನದ ಬಳಿಕ ಕಾಲೇಜಿಗೆ ರಜೆ ಇದ್ದ ಕಾರಣ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮೇಶ್ವರದ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಪಕ್ಕದ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಯಶ್ವಿತ್ ಮತ್ತು ಯುವರಾಜ್ ನೀರಾಟಕ್ಕಿಳಿದಿದ್ದು ದೈತ್ಯ ಅಲೆಗಳು ಅವರಿಬ್ಬರನ್ನು ಕೊಚ್ಚಿಕೊಂಡು ಹೋಗಿದೆ. ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಪರಿಣಿತ ಈಜುಗಾರರು ರಾತ್ರಿ ವರೆಗೂ ಶೋಧ ನಡೆಸಿದರೂ ನೀರುಪಾಲಾದ ಯುವರಾಜ್, ಯಶ್ವಿತ್ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಘಟನೆ ನಡೆದ ಸ್ಥಳದಲ್ಲೇ ವಿದ್ಯಾರ್ಥಿಗಳ ಮೃತದೇಹಗಳು ದೊರೆತಿದ್ದು ಉಳ್ಳಾಲ ಪೊಲೀಸರು ದೇರಳಕಟ್ಟೆ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.



ಮೃತ ಇಬ್ಬರು ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದು ತಂದೆ, ತಾಯಿ ಏಕೈಕ ಸಹೋದರಿಯರನ್ನ ಅಗಲಿದ್ದಾರೆ. ಸೋಮೇಶ್ವರ ಕಡಲ ಕಿನಾರೆಯಲ್ಲಿ ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಪ್ರವಾಸೋದ್ಯಮ ಇಲಾಖೆ ಇಲ್ಲಿ ಖಾಯಂ ಜೀವ ರಕ್ಷಕ ಸಿಬ್ಬಂದಿಗಳನ್ನ ನೇಮಿಸಿಲ್ಲ. ಕಡಲ ತೀರಕ್ಕೆ ಭೇಟಿ ಕೊಡುವ ಜನರು ಜಾಗರೂಕರಾಗಿರಬೇಕೆಂದು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಬಾಲಕೃಷ್ಣ ಎಚ್ಚರಿಸಿದ್ದಾರೆ.
Mangalore Two students drowned at Someshwar Beach, body found. Two students had drowned into the sea while they were playing with their friends. The body had been found now
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm