ಬ್ರೇಕಿಂಗ್ ನ್ಯೂಸ್
17-11-20 03:59 pm Mangaluru Correspondent ಕರಾವಳಿ
ಮಂಗಳೂರು, ನ.17: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಗುತ್ತಿಗೆ ನೀಡಿರುವ ಕೇಂದ್ರ ಸರಕಾರ, ಈ ನಿಲ್ದಾಣಕ್ಕೆ ಗೌತಮ್ ಅದಾನಿ ಹೆಸರಿಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ ಎಂದು ದ.ಕ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಗಳೂರು ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ- ಚೆನ್ನಯರ ಹೆಸರಿಡಬೇಕು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿದ್ದರೂ ಅದರ ಹೆಸರು ಬದಲಾವಣೆ ಮಾಡಿಲ್ಲ. ಅದೇ ರೀತಿ ಗುಜರಾತ್, ಮುಂಬಯಿ ವಿಮಾನ ನಿಲ್ದಾಣಗಳನ್ನು ಖಾಸಗಿ ನಿರ್ವಹಣೆಗೆ ಗುತ್ತಿಗೆ ನೀಡಿದ್ದರೂ, ಹೆಸರು ಬದಲಾಗಿಲ್ಲ. ಮಂಗಳೂರು ವಿಮಾನ ನಿಲ್ದಾಣದ ಹೆಸರನ್ನೇ ಅದಾನಿಗೆ ಒಪ್ಪಿಸಿದ್ದು ಏಕೆ ? ಈ ಬಗ್ಗೆ ಇಲ್ಲಿನ ಸಂಸದರು ಬಾಯಿ ತೆರೆದು ಸೂಕ್ತ ಹೆಸರಿಡಲು ಶಿಫಾರಸು ಮಾಡಬೇಕು ಎಂದು ಹೇಳಿದರು.
ಅದಾನಿ ಹೆಸರಿನಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಲು ಆಗ್ರಹಿಸಿ ಈಗಾಗಲೇ ಕಾಂಗ್ರೆಸ್ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದೆ. ನ.18ರಂದು ಸಂಜೆ ನಗರದ ಸರ್ಕ್ಯೂಟ್ ಹೌಸ್ನಿಂದ ವಿಮಾನ ನಿಲ್ದಾಣದ ವರೆಗೆ ಪಂಜಿನ ಮೆರವಣಿಗೆಯೊಂದಿಗೆ ಪ್ರತಿಭಟನಾ ಪ್ರದರ್ಶನ ನಡೆಸಲಾಗುವುದು. ಇದಕ್ಕೆ ಯಾವುದೇ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಿಥುನ್ ರೈ ಎಚ್ಚರಿಸಿದರು.
ವಿಮಾನ ನಿಲ್ದಾಣದಲ್ಲಿ ಅದಾನಿ ಕಂಪೆನಿಯ ಆನೆಯ ಚಿಹ್ನೆ ತೆರವುಗೊಳಿಸಿ, ಈ ನಾಡಿನ ಅಸ್ಮಿತೆಯ ಪ್ರತೀಕವಾಗಿರುವ ಈ ಹಿಂದೆ ಇದ್ದ ಹುಲಿ ಕುಣಿತದ ಚಿಹ್ನೆಯನ್ನು ಅಳವಡಿಸಬೇಕು ಎಂದು ಮಿಥುನ್ ರೈ ಆಗ್ರಹಿಸಿದರು.
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಶ್ರೀನಿವಾಸ ಮಲ್ಯರ ಪ್ರಯತ್ನದ ಫಲವಾಗಿ ದ.ಕ. ಜಿಲ್ಲೆಗೆ ಲಭಿಸಿರುವ ವಿಮಾನ ನಿಲ್ದಾಣಕ್ಕೆ ಯಾವ ಕೊಡುಗೆಯನ್ನು ನೀಡದ ಅದಾನಿಯ ಹೆಸರನ್ನು ಇಟ್ಟಿರುವುದು ಜಿಲ್ಲೆಯ ಜನರಿಗೆ ಮಾಡುತ್ತಿರುವ ಅಪಮಾನ. ಅಲ್ಲದೆ ನಾಚಿಗೇಡಿನ ಸಂಗತಿ. ತುಳುನಾಡಿನ ಇತಿಹಾಸವನ್ನು ಮರೆಸುವ ಕೆಲಸ ಮಾಡಲಾಗುತ್ತಿದೆ. ಇತಿಹಾಸ ಪುರುಷರ ಹೆಸರಿಡಬೇಕಲ್ಲದೆ ಕಂಪನಿ ಧಣಿಯ ಹೆಸರಿಡುವುದು ಎಷ್ಟು ಸರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಸದಾಶಿವ ಉಳ್ಳಾಲ್, ವಸಂತ್ ಬೆರ್ನಾರ್ಡ್, ಪಿಯೂಸ್ ಮೊದಲಾದವರು ಉಪಸ್ಥಿತರಿದ್ದರು.
District Youth Congress and Mulky-Moodbidiri Block Congress are set to hold torch light protest rally from Circuit House to Bajpe airport on Wednesday November 18 condemning the privatisation of Mangaluru International Airport (MIA).
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am