ಬ್ರೇಕಿಂಗ್ ನ್ಯೂಸ್
11-12-23 01:51 pm Mangalore Correspondent ಕರಾವಳಿ
ಮಂಗಳೂರು, ಡಿ.10: ನಗರದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಆಲಪ್ಪುಳ ಜಿಲ್ಲೆಯ ಕರುವೆಟ್ಟು ನಿವಾಸಿ ಸಚಿನ್ ರಾಜು (19) ಮೃತ ಯುವಕ. ಕಳೆದ ನವೆಂಬರ್ 30ರಂದು ಈತನನ್ನು ಪ್ರಥಮ ವರ್ಷದ ಜನರಲ್ ನರ್ಸಿಂಗ್ ಕಲಿಯಲು ಎ.ಶ್ಯಾಮ ರಾವ್ ನರ್ಸಿಂಗ್ ಕಾಲೇಜಿಗೆ ಸೇರಿಸಲಾಗಿತ್ತು. ಅದರಂತೆ, ವಳಚ್ಚಿಲ್ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಸಚಿನ್ ರಾಜು ಡಿ.8 ರಂದು ಕಾಲೇಜಿಗೆ ಹೋಗಿರಲಿಲ್ಲ. ಆರೋಗ್ಯ ಸರಿಯಿಲ್ಲ ಎಂದು ತರಗತಿ ಹೋಗದೇ ಇದ್ದ ಸಚಿನ್, ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಜೊತೆಗೆ ರೂಮಿನಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದರು. ಅಂದು ಮಧ್ಯಾಹ್ನ ಊಟಕ್ಕೆಂದು ಕೊಠಡಿಗೆ ಬಂದಾಗ ಸಚಿನ್ ಬೆಡ್ ಶೀಟನ್ನೇ ತುಂಡರಿಸಿ ಫ್ಯಾನಿಗೆ ಕಟ್ಟಿ ನೇಣು ಬಿಗಿದಿರುವುದು ಕಂಡುಬಂದಿತ್ತು. ಕೂಡಲೇ ನೇಣು ಕುಣಿಕೆಯನ್ನು ತುಂಡರಿಸಿ ಕಾಲೇಜಿನ ಶಿಕ್ಷಕರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಚಿನ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಈ ಬಗ್ಗೆ ಸಚಿನ್ ತಂದೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ವಿದ್ಯಾರ್ಥಿ ಸಾವಿಗೇನು ಕಾರಣ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old Nursing college student commits suicide in college hostel at Valachil in Mangalore. The deceased has been identifed as Sachin Raju from Kerala.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm