ಬ್ರೇಕಿಂಗ್ ನ್ಯೂಸ್
11-12-23 01:51 pm Mangalore Correspondent ಕರಾವಳಿ
ಮಂಗಳೂರು, ಡಿ.10: ನಗರದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಆಲಪ್ಪುಳ ಜಿಲ್ಲೆಯ ಕರುವೆಟ್ಟು ನಿವಾಸಿ ಸಚಿನ್ ರಾಜು (19) ಮೃತ ಯುವಕ. ಕಳೆದ ನವೆಂಬರ್ 30ರಂದು ಈತನನ್ನು ಪ್ರಥಮ ವರ್ಷದ ಜನರಲ್ ನರ್ಸಿಂಗ್ ಕಲಿಯಲು ಎ.ಶ್ಯಾಮ ರಾವ್ ನರ್ಸಿಂಗ್ ಕಾಲೇಜಿಗೆ ಸೇರಿಸಲಾಗಿತ್ತು. ಅದರಂತೆ, ವಳಚ್ಚಿಲ್ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಸಚಿನ್ ರಾಜು ಡಿ.8 ರಂದು ಕಾಲೇಜಿಗೆ ಹೋಗಿರಲಿಲ್ಲ. ಆರೋಗ್ಯ ಸರಿಯಿಲ್ಲ ಎಂದು ತರಗತಿ ಹೋಗದೇ ಇದ್ದ ಸಚಿನ್, ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಜೊತೆಗೆ ರೂಮಿನಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದರು. ಅಂದು ಮಧ್ಯಾಹ್ನ ಊಟಕ್ಕೆಂದು ಕೊಠಡಿಗೆ ಬಂದಾಗ ಸಚಿನ್ ಬೆಡ್ ಶೀಟನ್ನೇ ತುಂಡರಿಸಿ ಫ್ಯಾನಿಗೆ ಕಟ್ಟಿ ನೇಣು ಬಿಗಿದಿರುವುದು ಕಂಡುಬಂದಿತ್ತು. ಕೂಡಲೇ ನೇಣು ಕುಣಿಕೆಯನ್ನು ತುಂಡರಿಸಿ ಕಾಲೇಜಿನ ಶಿಕ್ಷಕರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಚಿನ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಈ ಬಗ್ಗೆ ಸಚಿನ್ ತಂದೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ವಿದ್ಯಾರ್ಥಿ ಸಾವಿಗೇನು ಕಾರಣ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old Nursing college student commits suicide in college hostel at Valachil in Mangalore. The deceased has been identifed as Sachin Raju from Kerala.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 10:55 am
HK News Staffer
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm