ಬ್ರೇಕಿಂಗ್ ನ್ಯೂಸ್
11-12-23 08:00 pm Mangalore Correspondent ಕರಾವಳಿ
ಮಂಗಳೂರು, ಡಿ.11: ಮಂಗಳೂರು ಮೂಲದ 20ರ ಹರೆಯದ ಹುಡುಗಿ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರು ಚಿತ್ರ ಹೈಡ್ & ಸೀಕ್ ಪ್ರತಿಷ್ಠಿತ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
"ಹೈಡ್ ಅಂಡ್ ಸೀಕ್" ಎಂಬ ಹೆಸರಿನ ಕಿರುಚಿತ್ರವನ್ನು ಭಾರತದ ಯುವ ನಿರ್ದೇಶಕಿ 20 ವರ್ಷ ವಯಸ್ಸಿನ ಮಿಸ್ ಕರೆನ್ ಕ್ಷಿತಿ ಸುವರ್ಣ ನಿರ್ದೇಶಿಸಿದ್ದಾರೆ. ಇದು ಸ್ಕಿಜೋಫ್ರೀನಿಯಾ ಮತ್ತು ಅದರ ತೀವ್ರ ಪರಿಣಾಮಗಳ ಕುರಿತು ಸಂದೇಶವನ್ನು ಹೊಂದಿರುವ 10 ನಿಮಿಷಗಳ ಕಿರುಚಿತ್ರವಾಗಿದೆ. ಖಿನ್ನತೆ ಮತ್ತು ಸ್ಕಿಜೊಫ್ರೀನಿಯಾ ಕಾಯಿಲೆಯಿಂದಾಗಿ ಕುಟುಂಬ ಹತ್ಯೆಗಳು / ಸಾಮೂಹಿಕ ಹತ್ಯೆಗಳನ್ನು ನೋಡುತ್ತಿರುವ ಇಂದಿನ ಕಾಲಘಟ್ಟದಲ್ಲಿ ಇದೇ ಕತೆಯನ್ನು ಮುಂದಿಟ್ಟು ಚಿತ್ರ ಮಾಡಿರುವುದು ವಿಶೇಷ.
ಕರೆನ್ ಕ್ಷಿತಿ ಸುವರ್ಣ ಅವರು ತಮ್ಮ ಕ್ರಾಫ್ಟ್ ಮತ್ತು ಕಲೆಗಾಗಿ ಮೆಚ್ಚುಗೆ ಪಡೆದಿದ್ದಾರೆ. ಈ ಕಿರುಚಿತ್ರವನ್ನು ವಿಸಿಕಾ ಫಿಲಂಸ್ ಜೊತೆಗೆ ಮೋಹನ್ ಮತ್ತು ಮನು ಗೊರೂರ್ ಸಹ ನಿರ್ಮಾಪಕರಾಗಿ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅನಿಲ್ ಕುಮಾರ್ ಛಾಯಾಗ್ರಹಣವಿದೆ. ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಸಂಗೀತ ಸಂಯೋಜನೆಯ ಬಾಪಿ ತುತುಲ್ ಅವರ ಹಿನ್ನೆಲೆ ಸಂಗೀತವಿದೆ.
ಹಲವಾರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಈ ಕಿರುಚಿತ್ರ ಪ್ರದರ್ಶಿಸಲಾಗಿದೆ. ಅವುಗಳಲ್ಲಿ ದೊಡ್ಡದು ಕೇನ್ಸ್ ವಿಶ್ವ ಚಲನಚಿತ್ರೋತ್ಸವ. ಇದನ್ನು ಕೊಲಂಬಿಯನ್ ಇನ್ಕ್ಲೂಸಿನ್ ಫೆಸ್ಟಿವಲ್ ಸೇರಿದಂತೆ ಹಲವಾರು ಅರ್ಹತಾ ಚಲನಚಿತ್ರೋತ್ಸವದಲ್ಲಿ ಕೂಡ ಪ್ರದರ್ಶಿಸಲಾಗಿದೆ. ಈ ನಡುವೆ, ನಿರ್ದೇಶಕಿ ಕರೆನ್ ಕೂಡ ಈ ಚಿತ್ರವನ್ನು ಅಕಾಡೆಮಿ ಮತ್ತು BAFTA ಪ್ರಶಸ್ತಿಗಳಿಗೆ ಕಳುಹಿಸಲು ಸಜ್ಜಾಗುತ್ತಿದ್ದಾರೆ.
Mangalorean girls Short movie Hide and seek nominated for Cannes Film Festival 2023.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm