ಬ್ರೇಕಿಂಗ್ ನ್ಯೂಸ್
11-12-23 10:36 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಮಫ್ತಿಯಲ್ಲಿ ಡ್ರೆಸ್ಸು, ಸೊಂಟಕ್ಕೆ ಪೊಲೀಸ್ ಇಲಾಖೆಯ ವಾಕಿ ಟಾಕಿ.. ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಧನರಾಜ್ ಹೆಲ್ಮೆಟ್ ಧರಿಸದೆ, ಮಫ್ತಿಯಲ್ಲಿದ್ದರೂ ಪೊಲೀಸ್ ವಾಕಿಟಾಕಿ ಹಾಕ್ಕೊಂಡು ಹೆದ್ದಾರಿಯಲ್ಲಿ ರಾಜಾರೋಷವಾಗಿ ಟೂ ವೀಲರ್ ಡ್ರೈವ್ ಮಾಡಿದ್ದು, ಕಾನೂನು ಪಾಲಕರೇ ಕಾನೂನು ಭಂಜನೆ ಮಾಡಿ ಸಿಕ್ಕಿಬಿದ್ದಿದ್ದಾರೆ.
ಸಾಮಾನ್ಯ ಜನರು ಹೆಲ್ಮೆಟ್ ಹಾಕದೇ ಇದ್ದರೆ ದಂಡ ವಿಧಿಸುವ ಪೊಲೀಸ್ ಅಧಿಕಾರಿಯೇ ತಮಗೆ ಕಾನೂನು ಪ್ರತ್ಯೇಕ ಇದೆಯೋ ಎನ್ನುವಂತೆ ವರ್ತಿಸಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಉಳ್ಳಾಲ ಠಾಣೆ ಪಿಎಸ್ಐ ಧನರಾಜ್ ಮಫ್ತಿಯಲ್ಲಿ ನೇತ್ರಾವತಿ ಸೇತುವೆಯಿಂದ ತೊಕ್ಕೊಟ್ಟಿನ ಕಡೆಗೆ ದ್ವಿಚಕ್ರ ವಾಹನ ಚಲಾಯಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಸೊಂಟದಲ್ಲಿ ವಾಕಿ ಟಾಕಿ ಇದ್ದುದನ್ನ ಕಂಡ ಇತರೇ ವಾಹನ ಸವಾರರು ಈತ ಪೊಲೀಸ್ ಎಂದು ಖಾತರಿ ಪಡಿಸಿ ಫೋಟೊ ಕ್ಲಿಕ್ಕಿಸಿದ್ದಾರೆ.

ಪಿಎಸ್ ಐ ಧನರಾಜ್ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ಗಸ್ತಿನಲ್ಲಿರುವಾಗ ಸಂಚಾರಿ ಕಾನೂನು ಉಲ್ಲಂಘಿಸುವ ವಾಹನ ಸವಾರರಿಗೆ ಮುಲಾಜಿಲ್ಲದೆ ದಂಡ ವಿಧಿಸುತ್ತಾರಂತೆ. ಆದರೆ ಕಾನೂನು ರಕ್ಷಣೆ ಮಾಡುವ ಹೊಣೆಗಾರಿಕೆಯುಳ್ಳ ಅದೇ ಪಿಎಸ್ ಐ ಈ ರೀತಿ ಹೆದ್ದಾರಿಯಲ್ಲಿ ಕಾನೂನನ್ನ ಗಾಳಿಗೆ ತೂರಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸೋದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಪಿಎಸ್ ಐ ಧನರಾಜ್ ಅವರ ತಲೆಗೆ ಸಣ್ಣ ಗಾಯವಾಗಿ ಪ್ಲಾಸ್ಟರ್ ಹಾಕಲಾಗಿದೆ. ಅದನ್ನೇ ನೆಪವಾಗಿಸಿ ಕಳೆದ ಕೆಲವು ದಿನಗಳಿಂದ ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದಾರೆ. ಈ ಬಗ್ಗೆ ನಾವು ಬುದ್ದಿ ಹೇಳಿದರೂ ಕೇಳುತ್ತಿಲ್ಲವೆಂದು ಉಳ್ಳಾಲ ಠಾಣೆಯ ಸಿಬ್ಬಂದಿಗಳು ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ. ತಲೆಗೆ ಗಾಯವಾಗಿದೆ ಎಂದು ಜನರಿಗೆಲ್ಲ ಒಂದೇ ರೀತಿ ಇರುವ ಕಾನೂನನ್ನು ಪೊಲೀಸರು ಉಲ್ಲಂಘನೆ ಮಾಡಲಾಗುತ್ತದೆಯೇ ? ಸಾಮಾನ್ಯ ಜನರು ಇದೇ ರೀತಿ ವರ್ತಿಸಿದರೆ, ಪೊಲೀಸರು ಹಾಗೇ ಬಿಡುತ್ತಾರೆಯೇ? ಮಂಗಳೂರು ಪೊಲೀಸ್ ಆಯುಕ್ತರು ಈ ಬಗ್ಗೆ ಏನು ಹೇಳುತ್ತಾರೋ..? ಈ ಸುದ್ದಿ ಅವರ ಕಿವಿಗೂ ತಲುಪದೆ ಇರಲಾರದು.
Mangalore Ullal Police PSI Dhanraj photo without helmet goes viral.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm