ಬ್ರೇಕಿಂಗ್ ನ್ಯೂಸ್
11-12-23 10:36 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಮಫ್ತಿಯಲ್ಲಿ ಡ್ರೆಸ್ಸು, ಸೊಂಟಕ್ಕೆ ಪೊಲೀಸ್ ಇಲಾಖೆಯ ವಾಕಿ ಟಾಕಿ.. ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಧನರಾಜ್ ಹೆಲ್ಮೆಟ್ ಧರಿಸದೆ, ಮಫ್ತಿಯಲ್ಲಿದ್ದರೂ ಪೊಲೀಸ್ ವಾಕಿಟಾಕಿ ಹಾಕ್ಕೊಂಡು ಹೆದ್ದಾರಿಯಲ್ಲಿ ರಾಜಾರೋಷವಾಗಿ ಟೂ ವೀಲರ್ ಡ್ರೈವ್ ಮಾಡಿದ್ದು, ಕಾನೂನು ಪಾಲಕರೇ ಕಾನೂನು ಭಂಜನೆ ಮಾಡಿ ಸಿಕ್ಕಿಬಿದ್ದಿದ್ದಾರೆ.
ಸಾಮಾನ್ಯ ಜನರು ಹೆಲ್ಮೆಟ್ ಹಾಕದೇ ಇದ್ದರೆ ದಂಡ ವಿಧಿಸುವ ಪೊಲೀಸ್ ಅಧಿಕಾರಿಯೇ ತಮಗೆ ಕಾನೂನು ಪ್ರತ್ಯೇಕ ಇದೆಯೋ ಎನ್ನುವಂತೆ ವರ್ತಿಸಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಉಳ್ಳಾಲ ಠಾಣೆ ಪಿಎಸ್ಐ ಧನರಾಜ್ ಮಫ್ತಿಯಲ್ಲಿ ನೇತ್ರಾವತಿ ಸೇತುವೆಯಿಂದ ತೊಕ್ಕೊಟ್ಟಿನ ಕಡೆಗೆ ದ್ವಿಚಕ್ರ ವಾಹನ ಚಲಾಯಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಸೊಂಟದಲ್ಲಿ ವಾಕಿ ಟಾಕಿ ಇದ್ದುದನ್ನ ಕಂಡ ಇತರೇ ವಾಹನ ಸವಾರರು ಈತ ಪೊಲೀಸ್ ಎಂದು ಖಾತರಿ ಪಡಿಸಿ ಫೋಟೊ ಕ್ಲಿಕ್ಕಿಸಿದ್ದಾರೆ.

ಪಿಎಸ್ ಐ ಧನರಾಜ್ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ಗಸ್ತಿನಲ್ಲಿರುವಾಗ ಸಂಚಾರಿ ಕಾನೂನು ಉಲ್ಲಂಘಿಸುವ ವಾಹನ ಸವಾರರಿಗೆ ಮುಲಾಜಿಲ್ಲದೆ ದಂಡ ವಿಧಿಸುತ್ತಾರಂತೆ. ಆದರೆ ಕಾನೂನು ರಕ್ಷಣೆ ಮಾಡುವ ಹೊಣೆಗಾರಿಕೆಯುಳ್ಳ ಅದೇ ಪಿಎಸ್ ಐ ಈ ರೀತಿ ಹೆದ್ದಾರಿಯಲ್ಲಿ ಕಾನೂನನ್ನ ಗಾಳಿಗೆ ತೂರಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸೋದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಪಿಎಸ್ ಐ ಧನರಾಜ್ ಅವರ ತಲೆಗೆ ಸಣ್ಣ ಗಾಯವಾಗಿ ಪ್ಲಾಸ್ಟರ್ ಹಾಕಲಾಗಿದೆ. ಅದನ್ನೇ ನೆಪವಾಗಿಸಿ ಕಳೆದ ಕೆಲವು ದಿನಗಳಿಂದ ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದಾರೆ. ಈ ಬಗ್ಗೆ ನಾವು ಬುದ್ದಿ ಹೇಳಿದರೂ ಕೇಳುತ್ತಿಲ್ಲವೆಂದು ಉಳ್ಳಾಲ ಠಾಣೆಯ ಸಿಬ್ಬಂದಿಗಳು ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ. ತಲೆಗೆ ಗಾಯವಾಗಿದೆ ಎಂದು ಜನರಿಗೆಲ್ಲ ಒಂದೇ ರೀತಿ ಇರುವ ಕಾನೂನನ್ನು ಪೊಲೀಸರು ಉಲ್ಲಂಘನೆ ಮಾಡಲಾಗುತ್ತದೆಯೇ ? ಸಾಮಾನ್ಯ ಜನರು ಇದೇ ರೀತಿ ವರ್ತಿಸಿದರೆ, ಪೊಲೀಸರು ಹಾಗೇ ಬಿಡುತ್ತಾರೆಯೇ? ಮಂಗಳೂರು ಪೊಲೀಸ್ ಆಯುಕ್ತರು ಈ ಬಗ್ಗೆ ಏನು ಹೇಳುತ್ತಾರೋ..? ಈ ಸುದ್ದಿ ಅವರ ಕಿವಿಗೂ ತಲುಪದೆ ಇರಲಾರದು.
Mangalore Ullal Police PSI Dhanraj photo without helmet goes viral.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm