ಬ್ರೇಕಿಂಗ್ ನ್ಯೂಸ್
11-12-23 10:36 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಮಫ್ತಿಯಲ್ಲಿ ಡ್ರೆಸ್ಸು, ಸೊಂಟಕ್ಕೆ ಪೊಲೀಸ್ ಇಲಾಖೆಯ ವಾಕಿ ಟಾಕಿ.. ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಧನರಾಜ್ ಹೆಲ್ಮೆಟ್ ಧರಿಸದೆ, ಮಫ್ತಿಯಲ್ಲಿದ್ದರೂ ಪೊಲೀಸ್ ವಾಕಿಟಾಕಿ ಹಾಕ್ಕೊಂಡು ಹೆದ್ದಾರಿಯಲ್ಲಿ ರಾಜಾರೋಷವಾಗಿ ಟೂ ವೀಲರ್ ಡ್ರೈವ್ ಮಾಡಿದ್ದು, ಕಾನೂನು ಪಾಲಕರೇ ಕಾನೂನು ಭಂಜನೆ ಮಾಡಿ ಸಿಕ್ಕಿಬಿದ್ದಿದ್ದಾರೆ.
ಸಾಮಾನ್ಯ ಜನರು ಹೆಲ್ಮೆಟ್ ಹಾಕದೇ ಇದ್ದರೆ ದಂಡ ವಿಧಿಸುವ ಪೊಲೀಸ್ ಅಧಿಕಾರಿಯೇ ತಮಗೆ ಕಾನೂನು ಪ್ರತ್ಯೇಕ ಇದೆಯೋ ಎನ್ನುವಂತೆ ವರ್ತಿಸಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಉಳ್ಳಾಲ ಠಾಣೆ ಪಿಎಸ್ಐ ಧನರಾಜ್ ಮಫ್ತಿಯಲ್ಲಿ ನೇತ್ರಾವತಿ ಸೇತುವೆಯಿಂದ ತೊಕ್ಕೊಟ್ಟಿನ ಕಡೆಗೆ ದ್ವಿಚಕ್ರ ವಾಹನ ಚಲಾಯಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಸೊಂಟದಲ್ಲಿ ವಾಕಿ ಟಾಕಿ ಇದ್ದುದನ್ನ ಕಂಡ ಇತರೇ ವಾಹನ ಸವಾರರು ಈತ ಪೊಲೀಸ್ ಎಂದು ಖಾತರಿ ಪಡಿಸಿ ಫೋಟೊ ಕ್ಲಿಕ್ಕಿಸಿದ್ದಾರೆ.

ಪಿಎಸ್ ಐ ಧನರಾಜ್ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ಗಸ್ತಿನಲ್ಲಿರುವಾಗ ಸಂಚಾರಿ ಕಾನೂನು ಉಲ್ಲಂಘಿಸುವ ವಾಹನ ಸವಾರರಿಗೆ ಮುಲಾಜಿಲ್ಲದೆ ದಂಡ ವಿಧಿಸುತ್ತಾರಂತೆ. ಆದರೆ ಕಾನೂನು ರಕ್ಷಣೆ ಮಾಡುವ ಹೊಣೆಗಾರಿಕೆಯುಳ್ಳ ಅದೇ ಪಿಎಸ್ ಐ ಈ ರೀತಿ ಹೆದ್ದಾರಿಯಲ್ಲಿ ಕಾನೂನನ್ನ ಗಾಳಿಗೆ ತೂರಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸೋದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಪಿಎಸ್ ಐ ಧನರಾಜ್ ಅವರ ತಲೆಗೆ ಸಣ್ಣ ಗಾಯವಾಗಿ ಪ್ಲಾಸ್ಟರ್ ಹಾಕಲಾಗಿದೆ. ಅದನ್ನೇ ನೆಪವಾಗಿಸಿ ಕಳೆದ ಕೆಲವು ದಿನಗಳಿಂದ ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದಾರೆ. ಈ ಬಗ್ಗೆ ನಾವು ಬುದ್ದಿ ಹೇಳಿದರೂ ಕೇಳುತ್ತಿಲ್ಲವೆಂದು ಉಳ್ಳಾಲ ಠಾಣೆಯ ಸಿಬ್ಬಂದಿಗಳು ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ. ತಲೆಗೆ ಗಾಯವಾಗಿದೆ ಎಂದು ಜನರಿಗೆಲ್ಲ ಒಂದೇ ರೀತಿ ಇರುವ ಕಾನೂನನ್ನು ಪೊಲೀಸರು ಉಲ್ಲಂಘನೆ ಮಾಡಲಾಗುತ್ತದೆಯೇ ? ಸಾಮಾನ್ಯ ಜನರು ಇದೇ ರೀತಿ ವರ್ತಿಸಿದರೆ, ಪೊಲೀಸರು ಹಾಗೇ ಬಿಡುತ್ತಾರೆಯೇ? ಮಂಗಳೂರು ಪೊಲೀಸ್ ಆಯುಕ್ತರು ಈ ಬಗ್ಗೆ ಏನು ಹೇಳುತ್ತಾರೋ..? ಈ ಸುದ್ದಿ ಅವರ ಕಿವಿಗೂ ತಲುಪದೆ ಇರಲಾರದು.
Mangalore Ullal Police PSI Dhanraj photo without helmet goes viral.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm