ಬ್ರೇಕಿಂಗ್ ನ್ಯೂಸ್
11-12-23 10:36 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಮಫ್ತಿಯಲ್ಲಿ ಡ್ರೆಸ್ಸು, ಸೊಂಟಕ್ಕೆ ಪೊಲೀಸ್ ಇಲಾಖೆಯ ವಾಕಿ ಟಾಕಿ.. ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಧನರಾಜ್ ಹೆಲ್ಮೆಟ್ ಧರಿಸದೆ, ಮಫ್ತಿಯಲ್ಲಿದ್ದರೂ ಪೊಲೀಸ್ ವಾಕಿಟಾಕಿ ಹಾಕ್ಕೊಂಡು ಹೆದ್ದಾರಿಯಲ್ಲಿ ರಾಜಾರೋಷವಾಗಿ ಟೂ ವೀಲರ್ ಡ್ರೈವ್ ಮಾಡಿದ್ದು, ಕಾನೂನು ಪಾಲಕರೇ ಕಾನೂನು ಭಂಜನೆ ಮಾಡಿ ಸಿಕ್ಕಿಬಿದ್ದಿದ್ದಾರೆ.
ಸಾಮಾನ್ಯ ಜನರು ಹೆಲ್ಮೆಟ್ ಹಾಕದೇ ಇದ್ದರೆ ದಂಡ ವಿಧಿಸುವ ಪೊಲೀಸ್ ಅಧಿಕಾರಿಯೇ ತಮಗೆ ಕಾನೂನು ಪ್ರತ್ಯೇಕ ಇದೆಯೋ ಎನ್ನುವಂತೆ ವರ್ತಿಸಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಉಳ್ಳಾಲ ಠಾಣೆ ಪಿಎಸ್ಐ ಧನರಾಜ್ ಮಫ್ತಿಯಲ್ಲಿ ನೇತ್ರಾವತಿ ಸೇತುವೆಯಿಂದ ತೊಕ್ಕೊಟ್ಟಿನ ಕಡೆಗೆ ದ್ವಿಚಕ್ರ ವಾಹನ ಚಲಾಯಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಸೊಂಟದಲ್ಲಿ ವಾಕಿ ಟಾಕಿ ಇದ್ದುದನ್ನ ಕಂಡ ಇತರೇ ವಾಹನ ಸವಾರರು ಈತ ಪೊಲೀಸ್ ಎಂದು ಖಾತರಿ ಪಡಿಸಿ ಫೋಟೊ ಕ್ಲಿಕ್ಕಿಸಿದ್ದಾರೆ.

ಪಿಎಸ್ ಐ ಧನರಾಜ್ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ಗಸ್ತಿನಲ್ಲಿರುವಾಗ ಸಂಚಾರಿ ಕಾನೂನು ಉಲ್ಲಂಘಿಸುವ ವಾಹನ ಸವಾರರಿಗೆ ಮುಲಾಜಿಲ್ಲದೆ ದಂಡ ವಿಧಿಸುತ್ತಾರಂತೆ. ಆದರೆ ಕಾನೂನು ರಕ್ಷಣೆ ಮಾಡುವ ಹೊಣೆಗಾರಿಕೆಯುಳ್ಳ ಅದೇ ಪಿಎಸ್ ಐ ಈ ರೀತಿ ಹೆದ್ದಾರಿಯಲ್ಲಿ ಕಾನೂನನ್ನ ಗಾಳಿಗೆ ತೂರಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸೋದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಪಿಎಸ್ ಐ ಧನರಾಜ್ ಅವರ ತಲೆಗೆ ಸಣ್ಣ ಗಾಯವಾಗಿ ಪ್ಲಾಸ್ಟರ್ ಹಾಕಲಾಗಿದೆ. ಅದನ್ನೇ ನೆಪವಾಗಿಸಿ ಕಳೆದ ಕೆಲವು ದಿನಗಳಿಂದ ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದಾರೆ. ಈ ಬಗ್ಗೆ ನಾವು ಬುದ್ದಿ ಹೇಳಿದರೂ ಕೇಳುತ್ತಿಲ್ಲವೆಂದು ಉಳ್ಳಾಲ ಠಾಣೆಯ ಸಿಬ್ಬಂದಿಗಳು ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ. ತಲೆಗೆ ಗಾಯವಾಗಿದೆ ಎಂದು ಜನರಿಗೆಲ್ಲ ಒಂದೇ ರೀತಿ ಇರುವ ಕಾನೂನನ್ನು ಪೊಲೀಸರು ಉಲ್ಲಂಘನೆ ಮಾಡಲಾಗುತ್ತದೆಯೇ ? ಸಾಮಾನ್ಯ ಜನರು ಇದೇ ರೀತಿ ವರ್ತಿಸಿದರೆ, ಪೊಲೀಸರು ಹಾಗೇ ಬಿಡುತ್ತಾರೆಯೇ? ಮಂಗಳೂರು ಪೊಲೀಸ್ ಆಯುಕ್ತರು ಈ ಬಗ್ಗೆ ಏನು ಹೇಳುತ್ತಾರೋ..? ಈ ಸುದ್ದಿ ಅವರ ಕಿವಿಗೂ ತಲುಪದೆ ಇರಲಾರದು.
Mangalore Ullal Police PSI Dhanraj photo without helmet goes viral.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm