ಬ್ರೇಕಿಂಗ್ ನ್ಯೂಸ್
11-12-23 11:05 pm Mangalore Correspondent ಕರಾವಳಿ
ಮಂಗಳೂರು, ಡಿ.11: ನಟೋರಿಯಸ್ ರೌಡಿ, ಟಾರ್ಗೆಟ್ ಇಲ್ಯಾಸ್ ಗ್ಯಾಂಗ್ ಮುನ್ನಡೆಸುತ್ತಿದ್ದ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದ ಐವರನ್ನು ನ್ಯಾಯಾಲಯ ಸಾಕ್ಷ್ಯಾಧಾರ ಕೊರತೆಯಿಂದ ಆರೋಪದಿಂದ ಖುಲಾಸೆಗೊಳಿಸಿದೆ.
ದಾವೂದ್, ಶಮೀರ್, ನಮೀರ್, ರಿಯಾಜ್ ಮತ್ತು ಅಬ್ದುಲ್ ಖಾದರ್ ಆರೋಪದಿಂದ ಖುಲಾಸೆಯಾದವರು. 2018ರ ಡಿಸೆಂಬರಿನಲ್ಲಿ ಟಾರ್ಗೆಟ್ ಇಲ್ಯಾಸ್ ನನ್ನು ಕಂಕನಾಡಿಯ ಜೆಪ್ಪು ಬಪ್ಪಾಲ್ ನಲ್ಲಿ ಹೆಂಡ್ತಿ ಮನೆಯಲ್ಲಿದ್ದಾಗಲೇ ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳು ಕಡಿದು ಭೀಕರ ಹತ್ಯೆ ಮಾಡಿದ್ದರು. ಕೃತ್ಯದ ಬಗ್ಗೆ ಪಾಂಡೇಶ್ವರ ಇನ್ಸ್ ಪೆಕ್ಟರ್ ಆಗಿದ್ದ ಕೆಯು ಬೆಳ್ಳಿಯಪ್ಪ ತನಿಖೆ ನಡೆಸಿದ್ದರು.
ಪ್ರಕರಣದಲ್ಲಿ 9 ಮಂದಿ ಆರೋಪಿಗಳನ್ನು ಗುರುತಿಸಲಾಗಿತ್ತು. ದಾವೂದ್ ಮತ್ತು ಮಹಮ್ಮದ್ ಶಮೀರ್ ಪ್ರಮುಖ ಆರೋಪಿಗಳೆಂದು ಹೇಳಲಾಗಿತ್ತು. 54 ಮಂದಿಯ ಸಾಕ್ಷ್ಯವನ್ನು ಒಳಗೊಂಡು ಸಮಗ್ರ ಚಾರ್ಜ್ ಶೀಟನ್ನು ಕೋರ್ಟಿಗೆ ಸಲ್ಲಿಕೆ ಮಾಡಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ಘಟನೆಗೆ ಪ್ರತ್ಯಕ್ಷ ದರ್ಶಿಗಳಾಗಿದ್ದ ಮೃತ ಇಲ್ಯಾಸ್ ಭಾವ ಮತ್ತು ಅತ್ತೆಯನ್ನು ಒಳಗೊಂಡಂತೆ 25 ಮಂದಿ ಸಾಕ್ಷಿಗಳನ್ನು ಕರೆಸಿತ್ತು. ಟಾರ್ಗೆಟ್ ಗ್ಯಾಂಗಿನಲ್ಲೇ ಇದ್ದ ದಾವೂದ್ ಮತ್ತು ಸಮೀರ್ ಹಳೆ ವೈರತ್ವದಿಂದ ಇಲ್ಯಾಸನ್ನು ಕೊಲೆ ಮಾಡಿದ್ದಾಗಿ ಚಾರ್ಜ್ ಶೀಟಿನಲ್ಲಿ ತಿಳಿಸಲಾಗಿತ್ತು.
ಜಿನೇಂದ್ರ ಕುಮಾರ್ ನೇತೃತ್ವದ ವಕೀಲರ ತಂಡವು ಆರೋಪಿಗಳ ಪರ ವಾದಿಸಿ, ಪೊಲೀಸರು ಸಲ್ಲಿಸಿದ್ದ ಸಾಕ್ಷ್ಯಾಧಾರಗಳನ್ನು ಸವಾಲು ಮಾಡಿ ವಕಾಲತ್ತಿನಲ್ಲಿ ಸೋಲಿಸಿದೆ. ಇದನ್ನು ಪರಿಗಣಿಸಿದ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬಂಧಿಸಲ್ಪಟ್ಟಿದ್ದ ಐವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ಪ್ರಕರಣದಲ್ಲಿ ಉಮರ್ ನವಾಫ್, ಮೊಹಮ್ಮದ್ ನಝೀರ್, ಅಸ್ಗರ್ ಆಲಿ, ನೌಶಾದ್ ಎಂಬವರು ಈವರೆಗೂ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ.
The Third Additional District and Sessions judge acquitted five accused on Monday, December 11, in target Ilyas murder case at Jeppu in 2018. The judgement was announced by district and sessions judge Sandhya S.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 10:55 am
HK News Staffer
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm