ಬ್ರೇಕಿಂಗ್ ನ್ಯೂಸ್
12-12-23 10:19 pm Mangalore Correspondent ಕರಾವಳಿ
ಮಂಗಳೂರು, ಡಿ.12: ಸಾವರ್ಕರ್ ವಿಚಾರದಲ್ಲಿ ಸಾಫ್ಟ್ ಹೇಳಿಕೆ ನೀಡಿದ್ದ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಬಗ್ಗೆ ಅವಹೇಳನ ಮಾಡಿ ಫೇಸ್ಬುಕ್ ಪೋಸ್ಟ್ ಹಾಕಿರುವ ಎಸ್ ಡಿಪಿಐ ಪಕ್ಷದ ಮುಖಂಡನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಎಸ್ಡಿಪಿಐ ಮುಖಂಡ ರಿಯಾಜ್ ಕಡಂಬು ಎಂಬಾತನನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದು ಉರ್ವಾ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಸುವರ್ಣ ಸೌಧದಲ್ಲಿ ಸಾವರ್ಕರ್ ಫೋಟೋ ತೆರವು ಮಾಡಬೇಕೆಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆಯ ಬಗ್ಗೆ ಸ್ಪೀಕರ್ ಖಾದರ್ ತನ್ನ ಅಭಿಪ್ರಾಯ ತಿಳಿಸಿದ್ದರು. 'ನನ್ನ ಕೆಲಸ ಜೋಡಿಸುವುದು, ಕಿತ್ತು ಬಿಸಾಕುವುದಲ್ಲ' ಎಂದು ಹೇಳಿಕೆ ನೀಡಿ ವಿವಾದ ತಣ್ಣಗಾಗಿಸಿದ್ದರು.


ಖಾದರ್ ನೀಡಿದ್ದ ಈ ಹೇಳಿಕೆಯ ವಿರುದ್ಧವಾಗಿ ಫೇಸ್ಬುಕ್ ನಲ್ಲಿ ಎಸ್ಡಿಪಿಐ ಮುಖಂಡ ರಿಯಾಜ್ ಕಡಂಬು ಕುಹಕ ಮಾಡಿ ಪೋಸ್ಟ್ ಹಾಕಿದ್ದರು. 'ಇಷ್ಟೇ... ಅದ್ಯಾವ ಪರಿಸರ ಹೇಳಿ, ಚಪ್ಪಲಿ ನೆಕ್ಕಿ ಸಾವರ್ಕರ್ ನ ಫೋಟೋವನ್ನು ಇಟ್ಟು ಜೋಡಿಸುತ್ತಿದ್ದ ಪರಿಸರ.. ಈ ವ್ಯಕ್ತಿಯಿಂದ RSS ವಿರುದ್ಧ ನಿಲ್ಲಲು ಈ ಆಯಸ್ಸು ಪೂರ್ತಿ ಅಧಿಕಾರದಲ್ಲಿದ್ದರೂ ಸಾಧ್ಯವಿಲ್ಲ. 'ಚುನಾವಣೆಯಲ್ಲಿ ಕೇಳ್ತಿದ್ರಲ್ಲಾ SDPI ಯಾಕೆ ಒಬ್ಬ ಮುಸ್ಲಿಂ MLA ವಿರುದ್ಧ ಸ್ಪರ್ಧೆ ಮಾಡುವುದು ಅಂತ.

'ನೋಡಿ ಉತ್ತರ ಸ್ಪಷ್ಟವಿದೆ, ದೇಶದ್ರೋಹಿ, ಸಂವಿಧಾನ ವಿರೋಧಿ, ಜಾತ್ಯತೀತ ವಿರೋಧಿ, ಕೋಮುವಾದಿ RSS ಜೊತೆ ಹೊಂದಾಣಿಕೆ ಮಾಡಿಕೊಂಡು ಈ ರೀತಿ ಜೋಡಿಸಲು ಹೊರಟಿರುವುದಕ್ಕೆ.. 'ಎಂದಾದರೂ ಒಂದು ದಿನ SDPI ಅದೊರಳಗೆ ಲಗ್ಗೆ ಇಟ್ಟರೆ, ಕಿತ್ತು ಬಿಸಾಕಿಯೇ ಬಿಸಾಕಲು ಸದನದಲ್ಲಿ ಹೋರಾಟ ಮಾಡಿಯೇ ಮಾಡುತ್ತೇವೆ. ಅದ್ಯಾವ ವ್ಯಕ್ತಿ ಸಭಾಧ್ಯಕ್ಷ ಆಗಿದ್ದರೂ ಕೂಡ. 'ಈ ಸಭಾಧ್ಯಕ್ಷರಿಗೆ ಚಾಲೆಂಜ್ ಹಾಕುತ್ತೇನೆ. ನೀವು ಸಾವರ್ಕರ್ ಫೋಟೊ ಕಿತ್ತು ಬಿಸಾಕಿ, ಟಿಪ್ಪು ಭಾವಚಿತ್ರ ಧಮ್ಮಿದ್ದರೆ ಅಳವಡಿಸಿ ಎಂದು ಸ್ಪೀಕರ್ ಹುದ್ದೆಗೆ ಅಗೌರವ ತೋರಿಸಿ ಪೋಸ್ಟ್ ಮಾಡಿದ್ದರು.

ಎಸ್ಡಿಪಿಐ ಮುಖಂಡ ಪರೋಕ್ಷವಾಗಿ ಖಾದರ್ ಅವರ ಸಂಘರ್ಷ ರಹಿತ ನಿಲುವನ್ನು ಟೀಕಿಸಿ, ಸಾವರ್ಕರ್ ಬಗ್ಗೆ ಟೀಕೆ ಮಾಡಿದ್ದರು. ಈ ಬಗ್ಗೆ ಕಾಂಗ್ರೆಸ್ ಪ್ರಮುಖರು ನೀಡಿದ ಸೂಚನೆಯಂತೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
The Mangaluru police have arrested an SDPI leader Riaz Kadambu for allegedly posting a Facebook post derogatory remarks against Assembly Speaker U T Khader for his soft remarks on Savarkar.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm