ಬ್ರೇಕಿಂಗ್ ನ್ಯೂಸ್
13-12-23 12:12 pm Udupi Correspondent ಕರಾವಳಿ
ಉಡುಪಿ, ಡಿ.13: ಹೆಸರಾಂತ ರಂಗಕರ್ಮಿ, ನಟ ನಿರ್ದೇಶಕ, ಸಮಾಜ ಸೇವಕರಾಗಿ ಗುರುತಿಸಿದ್ದ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಕೆ.ಲೀಲಾಧರ ಶೆಟ್ಟಿ(68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ(58) ದಂಪತಿ ತಮ್ಮ ಮನೆಯಲ್ಲೇ ಒಂದೇ ಕುಣಿಕೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಮಂಗಳವಾರ ಮಧ್ಯರಾತ್ರಿ ಕಾಪುವಿನ ತಮ್ಮ ಮನೆಯ ಪಕ್ಕಾಸಿಗೆ ಒಂದೇ ಸೀರೆಯನ್ನು ಬಿಗಿದು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ 90ರ ದಶಕದಲ್ಲಿ ಕಾಪು ಕ್ಷೇತ್ರದಿಂದ ಜನತಾದಳ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ರಂಗತರಂಗ ನಾಟಕ ತಂಡದ ಮೂಲಕ ನೂರಾರು ಕಲಾವಿದರನ್ನು ಹುಟ್ಟು ಹಾಕಿದ್ದರು. ಕಾಪು ಬಂಟರ ಸಂಘದಲ್ಲಿಯೂ ಸಕ್ರಿಯರಾಗಿದ್ದರು. ಮಜೂರು ಗ್ರಾಮ ಪಂಚಾಯತ್ ನಲ್ಲಿ ಈ ಹಿಂದೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಕಾಪು ತಾಲೂಕು ರಚನೆಯಾಗಬೇಕು ಎಂದು ಹೋರಾಟ ಸಮಿತಿ ರಚಿಸಿ, ಅದರ ಅಧ್ಯಕ್ಷರಾಗಿ ಹೆಜಮಾಡಿಯಿಂದ ಉದ್ಯಾವರದ ವರೆಗೆ ಪಾದಯಾತ್ರೆ ನಡೆಸಿ ಗಮನ ಸೆಳೆದಿದ್ದರು. ಸಾಮಾಜಿಕ, ಸಾಂಸ್ಕೃತಿಕ ನೆಲೆಯಲ್ಲಿ ಸದಾ ಮುಂಚೂಣಿಯಲ್ಲಿದ್ದ ಅವರು ಕಾಪು ಭಾಗದಲ್ಲಿ ಚಿರಪರಿಚಿತ ಮತ್ತು ಜನಾನುರಾಗಿ ವ್ಯಕ್ತಿಯಾಗಿದ್ದರು. ಇತ್ತೀಚೆಗೆ ಹೊಸ ನಾಟಕ ರಚನೆಯನ್ನು ಮಾಡಿದ್ದರು. ಇದರ ನಡುವಲ್ಲೇ ದಿಢೀರ್ ಸಾವಿಗೆ ಶರಣಾಗಿರುವುದು ಅಭಿಮಾನಿಗಳಲ್ಲಿ ಆಘಾತ ಮೂಡಿಸಿದೆ. ಕೌಟುಂಬಿಕ ಕಾರಣದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದ್ದು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.
Udupi Kaup Renowned community leader Leeladhar Shetty, wife Vasundara commits suicide. In a heart-breaking incident, Kaup Leeladhar Shetty and his wife Vasundara Shetty reportedly took their own lives late at night on Tuesday, December 12.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am