ಬ್ರೇಕಿಂಗ್ ನ್ಯೂಸ್
13-12-23 12:12 pm Udupi Correspondent ಕರಾವಳಿ
ಉಡುಪಿ, ಡಿ.13: ಹೆಸರಾಂತ ರಂಗಕರ್ಮಿ, ನಟ ನಿರ್ದೇಶಕ, ಸಮಾಜ ಸೇವಕರಾಗಿ ಗುರುತಿಸಿದ್ದ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಕೆ.ಲೀಲಾಧರ ಶೆಟ್ಟಿ(68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ(58) ದಂಪತಿ ತಮ್ಮ ಮನೆಯಲ್ಲೇ ಒಂದೇ ಕುಣಿಕೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಮಂಗಳವಾರ ಮಧ್ಯರಾತ್ರಿ ಕಾಪುವಿನ ತಮ್ಮ ಮನೆಯ ಪಕ್ಕಾಸಿಗೆ ಒಂದೇ ಸೀರೆಯನ್ನು ಬಿಗಿದು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ 90ರ ದಶಕದಲ್ಲಿ ಕಾಪು ಕ್ಷೇತ್ರದಿಂದ ಜನತಾದಳ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ರಂಗತರಂಗ ನಾಟಕ ತಂಡದ ಮೂಲಕ ನೂರಾರು ಕಲಾವಿದರನ್ನು ಹುಟ್ಟು ಹಾಕಿದ್ದರು. ಕಾಪು ಬಂಟರ ಸಂಘದಲ್ಲಿಯೂ ಸಕ್ರಿಯರಾಗಿದ್ದರು. ಮಜೂರು ಗ್ರಾಮ ಪಂಚಾಯತ್ ನಲ್ಲಿ ಈ ಹಿಂದೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಕಾಪು ತಾಲೂಕು ರಚನೆಯಾಗಬೇಕು ಎಂದು ಹೋರಾಟ ಸಮಿತಿ ರಚಿಸಿ, ಅದರ ಅಧ್ಯಕ್ಷರಾಗಿ ಹೆಜಮಾಡಿಯಿಂದ ಉದ್ಯಾವರದ ವರೆಗೆ ಪಾದಯಾತ್ರೆ ನಡೆಸಿ ಗಮನ ಸೆಳೆದಿದ್ದರು. ಸಾಮಾಜಿಕ, ಸಾಂಸ್ಕೃತಿಕ ನೆಲೆಯಲ್ಲಿ ಸದಾ ಮುಂಚೂಣಿಯಲ್ಲಿದ್ದ ಅವರು ಕಾಪು ಭಾಗದಲ್ಲಿ ಚಿರಪರಿಚಿತ ಮತ್ತು ಜನಾನುರಾಗಿ ವ್ಯಕ್ತಿಯಾಗಿದ್ದರು. ಇತ್ತೀಚೆಗೆ ಹೊಸ ನಾಟಕ ರಚನೆಯನ್ನು ಮಾಡಿದ್ದರು. ಇದರ ನಡುವಲ್ಲೇ ದಿಢೀರ್ ಸಾವಿಗೆ ಶರಣಾಗಿರುವುದು ಅಭಿಮಾನಿಗಳಲ್ಲಿ ಆಘಾತ ಮೂಡಿಸಿದೆ. ಕೌಟುಂಬಿಕ ಕಾರಣದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದ್ದು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.
Udupi Kaup Renowned community leader Leeladhar Shetty, wife Vasundara commits suicide. In a heart-breaking incident, Kaup Leeladhar Shetty and his wife Vasundara Shetty reportedly took their own lives late at night on Tuesday, December 12.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm