ಬ್ರೇಕಿಂಗ್ ನ್ಯೂಸ್
13-12-23 12:12 pm Udupi Correspondent ಕರಾವಳಿ
ಉಡುಪಿ, ಡಿ.13: ಹೆಸರಾಂತ ರಂಗಕರ್ಮಿ, ನಟ ನಿರ್ದೇಶಕ, ಸಮಾಜ ಸೇವಕರಾಗಿ ಗುರುತಿಸಿದ್ದ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಕೆ.ಲೀಲಾಧರ ಶೆಟ್ಟಿ(68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ(58) ದಂಪತಿ ತಮ್ಮ ಮನೆಯಲ್ಲೇ ಒಂದೇ ಕುಣಿಕೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಮಂಗಳವಾರ ಮಧ್ಯರಾತ್ರಿ ಕಾಪುವಿನ ತಮ್ಮ ಮನೆಯ ಪಕ್ಕಾಸಿಗೆ ಒಂದೇ ಸೀರೆಯನ್ನು ಬಿಗಿದು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ 90ರ ದಶಕದಲ್ಲಿ ಕಾಪು ಕ್ಷೇತ್ರದಿಂದ ಜನತಾದಳ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ರಂಗತರಂಗ ನಾಟಕ ತಂಡದ ಮೂಲಕ ನೂರಾರು ಕಲಾವಿದರನ್ನು ಹುಟ್ಟು ಹಾಕಿದ್ದರು. ಕಾಪು ಬಂಟರ ಸಂಘದಲ್ಲಿಯೂ ಸಕ್ರಿಯರಾಗಿದ್ದರು. ಮಜೂರು ಗ್ರಾಮ ಪಂಚಾಯತ್ ನಲ್ಲಿ ಈ ಹಿಂದೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಕಾಪು ತಾಲೂಕು ರಚನೆಯಾಗಬೇಕು ಎಂದು ಹೋರಾಟ ಸಮಿತಿ ರಚಿಸಿ, ಅದರ ಅಧ್ಯಕ್ಷರಾಗಿ ಹೆಜಮಾಡಿಯಿಂದ ಉದ್ಯಾವರದ ವರೆಗೆ ಪಾದಯಾತ್ರೆ ನಡೆಸಿ ಗಮನ ಸೆಳೆದಿದ್ದರು. ಸಾಮಾಜಿಕ, ಸಾಂಸ್ಕೃತಿಕ ನೆಲೆಯಲ್ಲಿ ಸದಾ ಮುಂಚೂಣಿಯಲ್ಲಿದ್ದ ಅವರು ಕಾಪು ಭಾಗದಲ್ಲಿ ಚಿರಪರಿಚಿತ ಮತ್ತು ಜನಾನುರಾಗಿ ವ್ಯಕ್ತಿಯಾಗಿದ್ದರು. ಇತ್ತೀಚೆಗೆ ಹೊಸ ನಾಟಕ ರಚನೆಯನ್ನು ಮಾಡಿದ್ದರು. ಇದರ ನಡುವಲ್ಲೇ ದಿಢೀರ್ ಸಾವಿಗೆ ಶರಣಾಗಿರುವುದು ಅಭಿಮಾನಿಗಳಲ್ಲಿ ಆಘಾತ ಮೂಡಿಸಿದೆ. ಕೌಟುಂಬಿಕ ಕಾರಣದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದ್ದು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.
Udupi Kaup Renowned community leader Leeladhar Shetty, wife Vasundara commits suicide. In a heart-breaking incident, Kaup Leeladhar Shetty and his wife Vasundara Shetty reportedly took their own lives late at night on Tuesday, December 12.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm