ಬ್ರೇಕಿಂಗ್ ನ್ಯೂಸ್
13-12-23 10:00 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಮಂಗಳಾದೇವಿ ದೇವಸ್ಥಾನವನ್ನು ಗೂಗಲ್ ಮ್ಯಾಪ್ ನಲ್ಲಿ ಮುಸ್ಲಿಂ ವ್ಯಕ್ತಿಯ ಕಂಪೌಂಡ್ ಎನ್ನುವ ರೀತಿ ಕಿಡಿಗೇಡಿಗಳು ತೋರಿಸಿದ್ದು, ಈ ಬಗ್ಗೆ ಭಕ್ತರ ಮೂಲಕ ತಿಳಿದ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.
ಬೆಂಗಳೂರು ಕಡೆಯಿಂದ ಬಂದಿದ್ದ ಭಕ್ತರು ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನವನ್ನು ಹುಡುಕಿ ಬಂದಿದ್ದರು. ಆದರೆ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನ ಇರುವ ಜಾಗವನ್ನು ಬೋಳಾರ್ ಉಮ್ಮರ್ ಶೇಖ್ ಕಂಪೌಂಡ್ ಎಂದು ತೋರಿಸಲಾಗಿತ್ತು. ದೇವಸ್ಥಾನ ರಸ್ತೆ ಎದುರಲ್ಲೇ ಇದ್ದರೂ, ಅದನ್ನು ಮುಸ್ಲಿಂ ವ್ಯಕ್ತಿಯ ಪ್ರಾಪರ್ಟಿ ಅನ್ನುವ ರೀತಿ ತೋರಿಸಿದ್ದರಿಂದ ದಿಗಿಲುಗೊಂಡ ಭಕ್ತರು ದೇವಸ್ಥಾನ ಸಿಬಂದಿಗೆ ತಿಳಿಸಿದ್ದರು.

ಗೂಗಲ್ ಮ್ಯಾಪ್ ಪರಿಶೀಲಿಸಿದಾಗ, ಉಮರ್ ಶೇಖ್ ಕಂಪೌಂಡ್ ಎಂದು ತೋರಿಸುತ್ತಿತ್ತು. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ರೀತಿಯಾಗಿ ಗೂಗಲ್ ಮ್ಯಾಪ್ ನಲ್ಲಿ ಬಿಂಬಿಸಿದ್ದರು. ಈ ಬಗ್ಗೆ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮಂಗಳಾದೇವಿ ದೇವಸ್ಥಾನದ ಮ್ಯಾನೇಜರ್ ರಂಜಿತ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ರೀತಿ ಬಿಂಬಿಸಿ ಮಂಗಳಾದೇವಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಅಲ್ಲದೆ, ಮಂಗಳಾದೇವಿ ಮಹತೋಭಾರ ದೇವಸ್ಥಾನ ಎಂದೇ ಗೂಗಲ್ ಮ್ಯಾಪ್ ನಲ್ಲಿ ಸರಿಪಡಿಸಬೇಕು ಎಂದು ಮನವಿಯಲ್ಲಿ ಭಕ್ತರು ಒತ್ತಾಯಿಸಿದ್ದಾರೆ.
Misnaming of Mangaladevi temple on Google Maps rectified after complaint in Mangalore. Unknown miscreants recently altered the name of the location housing the Mangaladevi temple on Google Maps, renaming it as ‘Bolar Shaikh Ummar Saheb Compound’. The compound, located just 200 meters away from the revered temple, raised concerns among the temple management committee and devotees.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm