ಬ್ರೇಕಿಂಗ್ ನ್ಯೂಸ್
13-12-23 10:00 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಮಂಗಳಾದೇವಿ ದೇವಸ್ಥಾನವನ್ನು ಗೂಗಲ್ ಮ್ಯಾಪ್ ನಲ್ಲಿ ಮುಸ್ಲಿಂ ವ್ಯಕ್ತಿಯ ಕಂಪೌಂಡ್ ಎನ್ನುವ ರೀತಿ ಕಿಡಿಗೇಡಿಗಳು ತೋರಿಸಿದ್ದು, ಈ ಬಗ್ಗೆ ಭಕ್ತರ ಮೂಲಕ ತಿಳಿದ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.
ಬೆಂಗಳೂರು ಕಡೆಯಿಂದ ಬಂದಿದ್ದ ಭಕ್ತರು ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನವನ್ನು ಹುಡುಕಿ ಬಂದಿದ್ದರು. ಆದರೆ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನ ಇರುವ ಜಾಗವನ್ನು ಬೋಳಾರ್ ಉಮ್ಮರ್ ಶೇಖ್ ಕಂಪೌಂಡ್ ಎಂದು ತೋರಿಸಲಾಗಿತ್ತು. ದೇವಸ್ಥಾನ ರಸ್ತೆ ಎದುರಲ್ಲೇ ಇದ್ದರೂ, ಅದನ್ನು ಮುಸ್ಲಿಂ ವ್ಯಕ್ತಿಯ ಪ್ರಾಪರ್ಟಿ ಅನ್ನುವ ರೀತಿ ತೋರಿಸಿದ್ದರಿಂದ ದಿಗಿಲುಗೊಂಡ ಭಕ್ತರು ದೇವಸ್ಥಾನ ಸಿಬಂದಿಗೆ ತಿಳಿಸಿದ್ದರು.

ಗೂಗಲ್ ಮ್ಯಾಪ್ ಪರಿಶೀಲಿಸಿದಾಗ, ಉಮರ್ ಶೇಖ್ ಕಂಪೌಂಡ್ ಎಂದು ತೋರಿಸುತ್ತಿತ್ತು. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ರೀತಿಯಾಗಿ ಗೂಗಲ್ ಮ್ಯಾಪ್ ನಲ್ಲಿ ಬಿಂಬಿಸಿದ್ದರು. ಈ ಬಗ್ಗೆ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮಂಗಳಾದೇವಿ ದೇವಸ್ಥಾನದ ಮ್ಯಾನೇಜರ್ ರಂಜಿತ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ರೀತಿ ಬಿಂಬಿಸಿ ಮಂಗಳಾದೇವಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಅಲ್ಲದೆ, ಮಂಗಳಾದೇವಿ ಮಹತೋಭಾರ ದೇವಸ್ಥಾನ ಎಂದೇ ಗೂಗಲ್ ಮ್ಯಾಪ್ ನಲ್ಲಿ ಸರಿಪಡಿಸಬೇಕು ಎಂದು ಮನವಿಯಲ್ಲಿ ಭಕ್ತರು ಒತ್ತಾಯಿಸಿದ್ದಾರೆ.
Misnaming of Mangaladevi temple on Google Maps rectified after complaint in Mangalore. Unknown miscreants recently altered the name of the location housing the Mangaladevi temple on Google Maps, renaming it as ‘Bolar Shaikh Ummar Saheb Compound’. The compound, located just 200 meters away from the revered temple, raised concerns among the temple management committee and devotees.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm