ಬ್ರೇಕಿಂಗ್ ನ್ಯೂಸ್
13-12-23 10:42 pm Mangalore Correspondent ಕರಾವಳಿ
ಮಂಗಳೂರು, ಡಿ.13: ಶಬರಿಮಲೆಯಲ್ಲಿ ಈ ಬಾರಿ ಮಂಡಲ ಪೂಜೆಯ ಸಂದರ್ಭದಲ್ಲಿಯೇ ಭಾರೀ ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ. ಹೀಗಾಗಿ ಶಬರಿಮಲೆಗೆ ತೆರಳುವ ಪಂಪಾ ನದಿಯ ತೀರದಲ್ಲೇ ಭಕ್ತರಿಗೆ ಪ್ರವೇಶಕ್ಕೆ ತೊಡಕಾಗಿದ್ದು, ಮಂಗಳವಾರ ಭಕ್ತರು ದಿಢೀರ್ ಆಗಿ ಪೊಲೀಸರ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದಾರೆ.
ಆಂಧ್ರಪ್ರದೇಶ, ತಮಿಳುನಾಡು ಭಾಗದ ಭಕ್ತರು ಹೆಚ್ಚಿದ್ದರಿಂದ ಭಕ್ತರನ್ನು ಸರಾಗವಾಗಿ ಹೋಗಲು ಬಿಡದೆ ಅಲ್ಲಲ್ಲಿ ಕೂಡಿ ಹಾಕಲಾಗಿತ್ತು. ಎರುಮೇಲಿ ಬೆಟ್ಟದಲ್ಲಿ ತಿರುಪತಿಯಲ್ಲಿ ಹಾಲ್ಗಳಲ್ಲಿ ಕೂಡಿ ಹಾಕುವಂತೆ ಅಲ್ಲಲ್ಲಿ ಭಕ್ತರನ್ನು ಗಂಟೆಗಳ ಕಾಲ ಕೂಡಿ ಹಾಕುತ್ತಿದ್ದರು. ಇದರಿಂದ ಸನ್ನಿಧಾನ ತಲುಪಲು ತುಂಬ ಪ್ರಯಾಸ ಪಡಬೇಕಾಯಿತು ಎಂದು ಸಿದ್ಧಕಟ್ಟೆಯಿಂದ ರೈಲಿನಲ್ಲಿ ಶಬರಿಮಲೆಗೆ ಹೋಗಿ ಬಂದ ಗೋಪಾಲ್ ತಿಳಿಸಿದ್ದಾರೆ.
ನಾವು ಈ ಸಲ 14 ವರ್ಷ ಶಬರಿಮಲೆಗೆ ಹೋಗಿದ್ದೆವು. ಪ್ರತಿ ವರ್ಷ ಮಾಲೆ ಹೋಗಿ ಹೋಗುತ್ತಿದ್ದರೂ, ಈ ಬಾರಿಯಷ್ಟು ಜನರನ್ನು ಮಂಡಲದ ಸಂದರ್ಭದಲ್ಲಿ ನೋಡಿರಲಿಲ್ಲ. ಯಾವಾಗಲೂ ಮಕರ ಬೆಳಕು ಸಂದರ್ಭದಲ್ಲಿ ಹೋಗುತ್ತಿದ್ದೆವು. ಈ ಬಾರಿ ಮಂಡಲ ಪೂಜೆಗೆ ಹೋಗಿದ್ದೆವು. ಸೋಮವಾರ, ಮಂಗಳವಾರ ಭಾರೀ ರಶ್ ಇತ್ತು. ಹೆಚ್ಚಿನ ಭಕ್ತರು ಆಂಧ್ರ ಮತ್ತು ತಮಿಳುನಾಡಿನವರೇ ಇದ್ದರು. ಅಲ್ಲಲ್ಲಿ ಕೂಡಿ ಹಾಕಿ ಹೋಗಲು ಬಿಡುತ್ತಿದ್ದುದೇ ಸಮಸ್ಯೆ ಆಗಿತ್ತು. ಆ ರೀತಿ ಯಾಕೆ ಮಾಡುತ್ತಿದ್ದರು ಗೊತ್ತಾಗಲ್ಲ. ಈ ಹಿಂದೆಯೂ ಮಕರದ ವೇಳೆ ಇಷ್ಟೇ ಜನರು ಸೇರುತ್ತಿದ್ದರು. ತೊಂದರೆ ಏನೂ ಆಗುತ್ತಿರಲಿಲ್ಲ ಎಂದು ಸಿದ್ಧಕಟ್ಟೆಯಿಂದ ಮಲೆಗೆ ತೆರಳಿರುವ ಸಂತೋಷ್ ಹೇಳುತ್ತಾರೆ.
ಮಲಯಾಳಂ ಮನೋರಮಾ ವರದಿ ಪ್ರಕಾರ, ಕೇರಳ, ತಮಿಳುನಾಡು, ಆಂಧ್ರ ಭಾಗದ ಭಕ್ತರು ಹೆಚ್ಚಿದ್ದರು. ಎರುಮೇಲಿ, ಪಂಪಾದಲ್ಲಿಯೇ ಪೊಲೀಸರು ಅಡ್ಡ ಹಾಕಿದ್ದರಿಂದ ರಶ್ ಆಗಿ ಹೆಚ್ಚಿನ ಜನ ಅಲ್ಲಿಂದಲೇ ಹಿಂತಿರುಗಿದ್ದಾರೆ. ನೂರಾರು ಮಂದಿಯನ್ನು ಏಟ್ಟುಮಾನೂರು ದೇವಸ್ಥಾನ ಬಳಿ ನಿಲ್ಲಿಸಲಾಗಿತ್ತು. ಒಂದು ದಿನ ಕಾದರೂ ಪಂಪೆಗೆ ಹೋಗಲು ಬಿಡದೇ ಇದ್ದುದರಿಂದ ಸಿಟ್ಟಾದ ಭಕ್ತರು ನಿರಾಸೆಗೊಂಡು ಅಲ್ಲಿಂದಲೇ ಮಾಲೆ ತೆಗೆದು ನಿರ್ಗಮಿಸಿದ್ದಾರೆ. ಶಬರಿಮಲೆಯಲ್ಲಿ ಅವ್ಯವಸ್ಥೆ, ಸಮಸ್ಯೆ ಆಗಿರುವ ಬಗ್ಗೆ ರಾಜ್ಯಪಾಲ ಮೊಹಮ್ಮದ್ ಆರಿಫ್ ಖಾನ್ ಪ್ರತಿಕ್ರಿಯಿಸಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸಬೇಕುಯ ಯಾರಿಂದ ಈ ಸಮಸ್ಯೆ ಆಗಿದೆ ಎನ್ನುವುದನ್ನು ಪತ್ತೆ ಮಾಡಬೇಕು ಎಂದಿದ್ದಾರೆ.
A large number of devotees gathered at Sabarimala during the Mandala Pooja this year. On Tuesday, devotees staged a protest against the police on the banks of the Pampa river, which leads to Sabarimala.
30-07-25 06:28 pm
Bangalore Correspondent
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
Kerala Nurse Nimisha Priya: ಕೇರಳ ನರ್ಸ್ ನಿಮಿಷ...
29-07-25 01:31 pm
30-07-25 09:06 am
HK News Desk
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
30-07-25 11:05 pm
Mangalore Correspondent
Dharmasthala Second Day of Exhumation, SIT: ಶ...
30-07-25 03:00 pm
Shirur Landslide, Malayalam Film: ಶಿರೂರು ಗುಡ್...
30-07-25 09:04 am
No Evidence, Dharmasthala Burial, SIT: ಹೆಣ ಹೂ...
29-07-25 09:56 pm
Dharmasthala case, SIT Begins Excavation, Upd...
29-07-25 02:20 pm
30-07-25 10:42 pm
Bangalore Correspondent
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm