ಬ್ರೇಕಿಂಗ್ ನ್ಯೂಸ್
15-12-23 01:25 pm Mangalore Correspondent ಕರಾವಳಿ
ಮಂಗಳೂರು, ಡಿ.15: ಬಜಪೆ ಕೆ.ಪಿ.ನಗರದಲ್ಲಿ ತಾಯಿ ತನ್ನ ಸಣ್ಣ ಮಗುವಿನ ಜೊತೆಗೆ ನಾಪತ್ತೆಯಾಗಿದ್ದು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿ ನಗರದ ಶಾಹಿಸ್ತ ಮಂಜೀಲ್ನ ಅಹ್ಮದ್ ಮಕ್ಸೂದ್ ಎಂಬವರ ಪತ್ನಿ ಶರೀನಾ ವೈ. (24) ಮತ್ತು ಮೂರು ವರ್ಷದ ಮಗ ಮಹ್ಮದ್ ತೋಹಾರ್ ಡಿ.11ರಂದು ರಾತ್ರಿ ಕಾಣೆಯಾಗಿದ್ದಾರೆ. ಅಹ್ಮದ್ ಮಕ್ಸೂದ್ ಅವರು ತಾಯಿ ಮತ್ತು ಪತ್ನಿಯೊಂದಿಗೆ ವಾಸವಾಗಿದ್ದು 6 ವರ್ಷಗಳ ಹಿಂದೆ ಸುಳ್ಯದ ಯೂಸುಫ್ ಅವರ ಪುತ್ರಿ ಶರಿನಾ (24) ಅವರನ್ನು ವಿವಾಹವಾಗಿದ್ದರು. ಇವರಿಗೆ 3 ವರ್ಷದ ಗಂಡು ಮಗುವಿದ್ದು, ಸದ್ಯ ಶರೀನಾ 5 ತಿಂಗಳ ಗರ್ಭಿಣಿ. ದಂಪತಿ ಅನ್ಯೋನ್ಯವಾಗಿದ್ದು, ಡಿ. 11ರಂದು ರಾತ್ರಿ ಎಲ್ಲರೂ ಮಲಗಿದ್ದಾಗ ಮಧ್ಯರಾತ್ರಿ 2.45ರ ಸುಮಾರಿಗೆ ಶರೀನಾ ಪುತ್ರನೊಂದಿಗೆ ಮನೆ ಬಿಟ್ಟು ಹೋಗಿದ್ದರು. ಮರುದಿನ ಬೆಳಗ್ಗೆ ಮನೆಯ ಎದುರಿನ ಸಿಸಿ ಕೆಮರಾ ಪರಿಶೀಲಿಸಿದಾಗ ಮನೆ ಬಿಟ್ಟು ಹೋಗಿರುವುದು ದೃಢಪಟ್ಟಿದೆ.
ಶರೀನಾ ಬಟ್ಟೆಬರೆ ಹಾಗೂ 5 ಗ್ರಾಂ ಚಿನ್ನದ ಆಭರಣ ತೆಗೆದುಕೊಂಡು ಹೋಗಿದ್ದು ತಾಯಿ ಮನೆಗೆ ಹೋಗುತ್ತಿರುವುದಾಗಿ ಬ್ಯಾರಿ ಭಾಷೆಯಲ್ಲಿ ಚೀಟಿ ಬರೆದಿಟ್ಟು ಹೋಗಿದ್ದಾರೆ. ಆದರೆ ಅವರ ತಾಯಿಗೆ ಫೋನ್ ಮಾಡಿ ವಿಚಾರಿಸಿದಾಗ ಅಲ್ಲಿಗೆ ತಲುಪಿರಲಿಲ್ಲ. ಸಂಬಂಧಿಕರ ಮನೆಯಲ್ಲಿ ಹುಡುಕಾಡಿದ್ದು ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಹ್ಮದ್ ಮಕ್ಸೂದ್ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A case has been registered at Bajpe police station after a mother went missing along with her small child at K.P. Nagar in Bajpe.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm