ಬ್ರೇಕಿಂಗ್ ನ್ಯೂಸ್
16-12-23 01:39 pm Mangalore Correspondent ಕರಾವಳಿ
ಮಂಗಳೂರು, ಡಿ 16: ಹತ್ತು ದಿನಗಳ ಅಂತರದಲ್ಲಿ ಮೂರನೇ ವಿದೇಶಿ ಪ್ರವಾಸಿ ಹಡಗು ಮಂಗಳೂರಿಗೆ ಆಗಮಿಸಿತು. ನವಮಂಗಳೂರು ಬಂದರಿಗೆ ಆಗಮಿಸಿದ M.S Nautica ಹೆಸರಿನ ಐಷರಾಮಿ ಹಡಗಿನಲ್ಲಿ 501 ವಿದೇಶಿ ಪ್ರಯಾಣಿಕರು ಆಗಮಿಸಿದ್ದರು. ಜೊತೆಗೆ 395 ಸಿಬ್ಬಂದಿಗಳು ಆಗಮಿಸಿದ್ದರು.
ದುಬೈನಿಂದ ಆಗಮಿಸಿದ್ದ ಈ ಹಡಗು ಮುಂಬೈ, ಗೋವಾ ಬಳಿಕ ಮಂಗಳೂರು ತಲುಪಿತು. ಕಡಲ ನಗರಿಗೆ ಬಂದ ವಿದೇಶಿ ಪ್ರವಾಸಿಗರನ್ನು ಚೆಂಡೆ ಮತ್ತು ಯಕ್ಷಗಾನ ವೇಷಗಳ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.
ಕ್ರೂಸ್ ಲಾಂಜ್ನಲ್ಲಿ ವಿವಿಧ ಸಾಂಸ್ಕೃತಿಕ ಆಕರ್ಷಣೆಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಜೊತೆಗೆ ಅಗತ್ಯ ವೈದ್ಯಕೀಯ ತಪಾಸಣೆ, ಬಸ್ಗಳು ಮತ್ತು ವಿಶೇಷ ಟ್ಯಾಕ್ಸಿಗಳ ವ್ಯವಸ್ಥೆ ಮಾಡಲಾಗಿತ್ತು. ಆಯುಷ್ ಸಚಿವಾಲಯದಿಂದ ಧ್ಯಾನ ಕೇಂದ್ರ, ಉಚಿತ ವೈಫೈ ಮತ್ತು ಮಂಗಳೂರನ್ನು ಬಿಂಬಿಸುವ ಸೆಲ್ಫಿ ಸ್ಟ್ಯಾಂಡ್ಗಳನ್ನು ಅಳವಡಿಸಲಾಗಿತ್ತು.
ಕಾರ್ಕಳದ ಗೋಮಟೇಶ್ವರ ದೇವಸ್ಥಾನ, ಮೂಡಬಿದ್ರಿಯಲ್ಲಿರುವ ಸಾವಿರ ಕಂಬಗಳ ಬಸದಿ, ಸೋನ್ಸ್ ಫಾರ್ಮ್, ಅಚಲ್ ಗೋಡಂಬಿ ಕಾರ್ಖಾನೆ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನ, ಸೇಂಟ್ ಅಲೋಶಿಯಸ್ ಚಾಪೆಲ್ ಹಾಗೂ ಸ್ಥಳೀಯ ಮಾರುಕಟ್ಟೆ ಮತ್ತು ನಗರದಲ್ಲಿ ಸಾಂಪ್ರದಾಯಿಕ ಮನೆಗಳ ಭೇಟಿ ನಡೆಯಿತು. ಮಂಗಳೂರಿನ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುವ ವರ್ಣರಂಜಿತ ಸ್ಮರಣಿಕೆಗಳನ್ನು ಪ್ರವಾಸಿಗರಿಗೆ ನೀಡಲಾಯಿತು.
ಗುರುವಾರ ಇದೇ ಬಂದರಿಗೆ ಎರಡನೇ ಪ್ರವಾಸಿ ಹಡಗು ಆಗಮಿಸಿತ್ತು. ಫ್ರೆಡ್ ಓಲ್ಸೆನ್ ಕ್ರೂಸ್ ಲೈನ್ಸ್ ಹಡಗು 'MS BOLETTE' ಬೆಳಿಗ್ಗೆ 8 ಗಂಟೆಗೆ ಬಂದಿತ್ತು. ಹಡಗಿನಲ್ಲಿ 704 ಪ್ರಯಾಣಿಕರು ಮತ್ತು 645 ಸಿಬ್ಬಂದಿ ಇದ್ದರು. ಈ ಹಡಗಿನ ಒಟ್ಟಾರೆ ಉದ್ದ 238 ಮೀಟರ್ ಮತ್ತು 62,735 ಒಟ್ಟು ಟನ್ನೇಜ್ ಮತ್ತು ಇದು 8.1 ಮೀಟರ್ ಕರಡು ಸಾಗಿಸುವ ಸಾಮರ್ಥ್ಯ ಹೊಂದಿದೆ. ಹಡಗಿನಿಂದ ಇಳಿಯುವಾಗ ಪ್ರಯಾಣಿಕರಿಗೆ ಚೆಂಡೆ ಮತ್ತು ಹುಲಿವೇಷ ಕುಣಿತಗಳ ಮೂಲಕ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.
The third foreign tourist ship arrived in Mangaluru within a span of 10 days. A total of 501 foreign passengers were on board the luxury ship M.S. Nautica that arrived at The New Mangalore Port. In addition, 395 personnel arrived.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm