ಬ್ರೇಕಿಂಗ್ ನ್ಯೂಸ್
16-12-23 03:44 pm Mangalore Correspondent ಕರಾವಳಿ
ಪುತ್ತೂರು, ಡಿ.16: ಪುತ್ತೂರಿನಲ್ಲಿ ಮತ್ತೋರ್ವ ಹಿಂದು ಸಂಘಟನೆ ಕಾರ್ಯಕರ್ತನನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಲು ಪೊಲೀಸರು ಮುಂದಾಗಿದ್ದಾರೆ. ಡಿವೈಎಸ್ಪಿ ವರದಿ ಹಿನ್ನೆಲೆ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೇಶ್ ಕುಮಾರ್ ನಾಯರ್ ಎಂಬವರಿಗೆ ನೋಟಿಸ್ ನೀಡಲಾಗಿದ್ದು ನಿಮ್ಮನ್ನ ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ.
ಸದ್ಯ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತ. ಹಲ್ಲೆ, ನೈತಿಕ ಪೊಲೀಸ್ ಗಿರಿ ಮಾದರಿಯ ನಾಲ್ಕು ಪ್ರಕರಣಗಳಲ್ಲಿ ಪ್ರವೇಶ್ ಆರೋಪಿಯಾಗಿದ್ದು ಈತ ಪುತ್ತೂರಿನಲ್ಲೇ ಇದ್ದರೆ ಕೋಮು ವೈಷಮ್ಯ, ಗಲಭೆ ಆಗುವುದಕ್ಕೆ ಆಸ್ಪದ ನೀಡಿದಂತಾಗುತ್ತದೆ. ಆದ್ದರಿಂದ ಕೋರ್ಟ್ ಹಾಜರಾತಿ ಹೊರತುಪಡಿಸಿ ದ.ಕ. ಜಿಲ್ಲೆಯಲ್ಲಿ ಇರದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಬೀದರ್ ಜಿಲ್ಲೆಯ ಬಸವಕಲ್ಯಾಣಕ್ಕೆ ಗಡೀಪಾರು ಮಾಡಬೇಕು ಎಂದು ಪುತ್ತೂರು ಡಿವೈಎಸ್ಪಿ ವರದಿ ನೀಡಿದ್ದಾರೆ.
ಪೊಲೀಸರ ವರದಿ ಹಿನ್ನೆಲೆಯಲ್ಲಿ ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಪ್ರವೇಶ್ ಕುಮಾರ್ ಗೆ ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ. ಪೊಲೀಸರ ಈ ನಡೆಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ. ಇತ್ತೀಚೆಗೆ ಇದೇ ಮಾದರಿಯಲ್ಲಿ ನಾಲ್ವರು ಸಂಘಟನೆ ಕಾರ್ಯಕರ್ತರನ್ನು ಗಡೀಪಾರು ಮಾಡಲು ನೋಟಿಸ್ ಮಾಡಲಾಗಿತ್ತು. ಗಡೀಪಾರು ಆದೇಶ ಆಗುವ ಮೊದಲೇ ನ್ಯಾಯಾಲಯದಿಂದ ತಡೆ ವಿಧಿಸಲಾಗಿತ್ತು.
The police are planning to deport another Hindu outfit activist Pravish Kumar from Puttur to Bidar district. Puttur Assistant Commissioner has issued a notice based on the DySP's report.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm