ಬ್ರೇಕಿಂಗ್ ನ್ಯೂಸ್
16-12-23 03:44 pm Mangalore Correspondent ಕರಾವಳಿ
ಪುತ್ತೂರು, ಡಿ.16: ಪುತ್ತೂರಿನಲ್ಲಿ ಮತ್ತೋರ್ವ ಹಿಂದು ಸಂಘಟನೆ ಕಾರ್ಯಕರ್ತನನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಲು ಪೊಲೀಸರು ಮುಂದಾಗಿದ್ದಾರೆ. ಡಿವೈಎಸ್ಪಿ ವರದಿ ಹಿನ್ನೆಲೆ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೇಶ್ ಕುಮಾರ್ ನಾಯರ್ ಎಂಬವರಿಗೆ ನೋಟಿಸ್ ನೀಡಲಾಗಿದ್ದು ನಿಮ್ಮನ್ನ ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ.
ಸದ್ಯ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತ. ಹಲ್ಲೆ, ನೈತಿಕ ಪೊಲೀಸ್ ಗಿರಿ ಮಾದರಿಯ ನಾಲ್ಕು ಪ್ರಕರಣಗಳಲ್ಲಿ ಪ್ರವೇಶ್ ಆರೋಪಿಯಾಗಿದ್ದು ಈತ ಪುತ್ತೂರಿನಲ್ಲೇ ಇದ್ದರೆ ಕೋಮು ವೈಷಮ್ಯ, ಗಲಭೆ ಆಗುವುದಕ್ಕೆ ಆಸ್ಪದ ನೀಡಿದಂತಾಗುತ್ತದೆ. ಆದ್ದರಿಂದ ಕೋರ್ಟ್ ಹಾಜರಾತಿ ಹೊರತುಪಡಿಸಿ ದ.ಕ. ಜಿಲ್ಲೆಯಲ್ಲಿ ಇರದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಬೀದರ್ ಜಿಲ್ಲೆಯ ಬಸವಕಲ್ಯಾಣಕ್ಕೆ ಗಡೀಪಾರು ಮಾಡಬೇಕು ಎಂದು ಪುತ್ತೂರು ಡಿವೈಎಸ್ಪಿ ವರದಿ ನೀಡಿದ್ದಾರೆ.
ಪೊಲೀಸರ ವರದಿ ಹಿನ್ನೆಲೆಯಲ್ಲಿ ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಪ್ರವೇಶ್ ಕುಮಾರ್ ಗೆ ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ. ಪೊಲೀಸರ ಈ ನಡೆಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ. ಇತ್ತೀಚೆಗೆ ಇದೇ ಮಾದರಿಯಲ್ಲಿ ನಾಲ್ವರು ಸಂಘಟನೆ ಕಾರ್ಯಕರ್ತರನ್ನು ಗಡೀಪಾರು ಮಾಡಲು ನೋಟಿಸ್ ಮಾಡಲಾಗಿತ್ತು. ಗಡೀಪಾರು ಆದೇಶ ಆಗುವ ಮೊದಲೇ ನ್ಯಾಯಾಲಯದಿಂದ ತಡೆ ವಿಧಿಸಲಾಗಿತ್ತು.
The police are planning to deport another Hindu outfit activist Pravish Kumar from Puttur to Bidar district. Puttur Assistant Commissioner has issued a notice based on the DySP's report.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm