ಬ್ರೇಕಿಂಗ್ ನ್ಯೂಸ್
16-12-23 05:23 pm Mangalore Correspondent ಕರಾವಳಿ
ಮಂಗಳೂರು, ಡಿ.16: ಕೇಂದ್ರ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಕರ್ನಾಟಕದಲ್ಲಿ ಮಾತ್ರ ಅಳವಡಿಕೆ ಮಾಡಲಾಗಿತ್ತು. ಬೇರಾವುದೇ ರಾಜ್ಯದಲ್ಲಿ ಈ ನೀತಿ ಇನ್ನೂ ಜಾರಿಯಾಗಿಲ್ಲ. ಯೋಗ, ಭಗವದ್ಗೀತೆ ಕಲಿಯುವುದಕ್ಕೆ ಅಥವಾ ಮೂರರಿಂದ ನಾಲ್ಕು ವರ್ಷದ ಡಿಗ್ರಿ ಮಾಡಲು ಎನ್ಇಪಿ ಜಾರಿ ಮಾಡಬೇಕಿದೆಯೇ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರಶ್ನೆ ಮಾಡಿದ್ದಾರೆ.
ಸಚಿವರಾದ ಬಳಿಕ ಮೊದಲ ಬಾರಿಗೆ ಮಂಗಳೂರು ವಿವಿಗೆ ಆಗಮಿಸಿದ ಸುಧಾಕರ್ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಎನ್ಇಪಿ ಬದಲು ರಾಜ್ಯ ಶಿಕ್ಷಣ ನೀತಿ – ಎಸ್ಇಪಿ ಜಾರಿಗೆ ತರಲಿದ್ದೇವೆ. ಅದರ ಬಗ್ಗೆ ಈಗಾಗಲೇ ತಜ್ಞರು ರೂಪುರೇಷೆ ತಯಾರಿಸಿದ್ದಾರೆ. ಹೊಸ ನೀತಿ ಜಾರಿಯಾದ ಬಳಿಕವೇ ಅದರ ಪ್ರಕಾರ ಪ್ರವೇಶಾತಿ ನಡೆಸುತ್ತೇವೆ. ಈಗಾಗಲೇ ಎನ್ಇಪಿಯಡಿ ಸೆಮಿಸ್ಟರ್ ಕಲಿಯುತ್ತಿರುವವರಿಗೆ ಅಥವಾ ಮೂರು ವರ್ಷ ಪೂರ್ತಿಗೊಳಿಸಿದವರಿಗೆ ಹೊಸ ನೀತಿಯಿಂದ ತೊಂದರೆಯಾಗಲ್ಲ ಎಂದು ಹೇಳಿದರು.
ಉದ್ಯೋಗ ಕ್ಷೇತ್ರದಲ್ಲಿ ಇಂಗ್ಲಿಷ್ ಭಾಷಾ ಜ್ಞಾನ ಅಗತ್ಯವಾಗುತ್ತಿದ್ದು, ಇದಕ್ಕಾಗಿ ಉನ್ನತ ಶಿಕ್ಷಣದಲ್ಲಿ ಉಚಿತವಾಗಿ ಇಂಗ್ಲಿಷ್ ಕಲಿಸಲು ವಾಧ್ವಾನಿ ಫೌಂಡೇಶನ್ ಮುಂದೆ ಬಂದಿದೆ. ಮೊದಲಿಗೆ ಧಾರವಾಡ ವಿವಿಯಲ್ಲಿ ಫೌಂಡೇಶನ್ ಕಡೆಯಿಂದ ಉಚಿತ ಬೋಧನೆ ನಡೆಯಲಿದೆ. ಆಬಳಿಕ ರಾಜ್ಯ ವ್ಯಾಪಿ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು. ಮಂಗಳೂರು ವಿವಿಯ ಕ್ಯಾಂಪಸ್ ನಲ್ಲಿ ಹಿಂದಿನ ಕುಲಪತಿ ಭೈರಪ್ಪ ಕಾಲದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹಾಸ್ಟೆಲ್ ನಿರ್ಮಾಣಕ್ಕಾಗಿ 46 ಕೋಟಿಯ ಯೋಜನೆ ತಯಾರಿಸಿ, ಅರೆಬರೆ ಕಾಮಗಾರಿ ನಡೆಸಿದ್ದು ಅರ್ಧಕ್ಕೆ ನಿಂತಿದೆ. ಈ ಬಗ್ಗೆ ತನಿಖೆ ಮಾಡಿಸುತ್ತೀರಾ ಎಂಬ ಪ್ರಶ್ನೆಗೆ, ಈ ರೀತಿಯ ವಿಚಾರ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿ ಜೊತೆಗಿದ್ದ ಮಂಗಳೂರು ವಿವಿಯ ಅಧಿಕಾರಿಗಳಲ್ಲಿ ಪ್ರಶ್ನೆ ಮಾಡಿದರು. ರಿಜಿಸ್ಟ್ರಾರ್ ಆ ಕಾಮಗಾರಿಗೆ 52 ಕೋಟಿ ಯೋಜನೆ ಹಾಕಿದ್ದು, ಈವರೆಗೆ 36 ಕೋಟಿ ಖರ್ಚಾಗಿದೆ. ಇನ್ನೂ 12 ಕೋಟಿ ಅಗತ್ಯವಿದೆ ಎಂದು ಹೇಳಿದರು.
ಕಳೆದ ಬಾರಿ ಇಂಟರ್ನಲ್ ಫಂಡನ್ನೂ ಆ ಕಟ್ಟಡಕ್ಕೆ ಭರಿಸಲಾಗಿತ್ತು. ಕಾಮಗಾರಿಯನ್ನೇ ಪೂರ್ತಿಗೊಳಿಸದೆ ಹಾಸ್ಟೆಲ್ ಉದ್ಘಾಟನೆ ಮಾಡಲಾಗಿತ್ತು ಎಂದು ಸಚಿವರ ಗಮನಸೆಳೆದಾಗ, ಹೌದೇ.. ಆ ರೀತಿಯ ಮಾಹಿತಿ ನನಗಿಲ್ಲ. ನಿಮ್ಮಲ್ಲಿ ಹೆಚ್ಚುವರಿ ಮಾಹಿತಿಗಳಿದ್ದರೆ ನನಗೆ ತಲುಪಿಸಿ, ತನಿಖೆ ಮಾಡಿಸುತ್ತೇನೆ ಎಂದು ಹೇಳಿದರು. ವಿಶ್ವವಿದ್ಯಾನಿಲಯದಲ್ಲಿ ತುಳು ಎಂಎ ಆರಂಭಿಸಿದ್ದರೂ, ಪ್ರತ್ಯೇಕ ವಿಭಾಗ ಮಾಡಿಲ್ಲ ಎಂದು ಕೇಳಿದ ಪ್ರಶ್ನೆಗೆ, ನೇರವಾಗಿ ಕುಲಪತಿ ಜಯರಾಜ ಅಮೀನ್ ಉತ್ತರಿಸಿ, ಆ ಕುರಿತು ಸರಕಾರಕ್ಕೆ ಬರೆದಿದ್ದೇವೆ. ಎಲ್ಲ ಪ್ರಕ್ರಿಯೆ ಮುಗಿಸಲಾಗಿದ್ದು, ಸರಕಾರದಿಂದ ಅನುಮತಿ ದೊರೆತ ಕೂಡಲೇ ಮಾಡುತ್ತೇವೆ ಎಂದರು.
ಮಂಗಳೂರು, ಕುವೆಂಪು ವಿವಿ, ರಾಣಿ ಚೆನ್ನಮ್ಮ ವಿವಿ ಸೇರಿ ನಾಲ್ಕು ವಿಶ್ವವಿದ್ಯಾನಿಲಯಗಳಿಗೆ ಪೂರ್ಣಾವಧಿ ಕುಲಪತಿಗಳ ನೇಮಕ ಆಗಬೇಕಿದೆ. ಅದಕ್ಕಾಗಿ ಕಮಿಟಿ ಮಾಡಿದ್ದು, ಸದ್ಯದಲ್ಲೇ ನೇಮಕಾತಿ ಆಗಲಿದೆ. ರಿಜಿಸ್ಟ್ರಾರ್ ಹುದ್ದೆಗೆ ಪೂರ್ಣಾವಧಿ ಕೆಎಎಸ್ ಮುಗಿಸಿದ ಅಧಿಕಾರಿಯ ಅಗತ್ಯವಿದೆ. ಅದನ್ನೂ ಮಾಡುತ್ತೇವೆ ಎಂದು ಸಚಿವ ಸುಧಾಕರ್ ಹೇಳಿದರು.
SEP will not create any confusion says Education Minister Sudhakar in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 10:55 am
HK News Staffer
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm