ಬ್ರೇಕಿಂಗ್ ನ್ಯೂಸ್
16-12-23 09:44 pm Mangalore Correspondent ಕರಾವಳಿ
ಮಂಗಳೂರು, ಡಿ.16: ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ಆಗಿದೆ, ಜನರ ದುಡ್ಡನ್ನು ಬೇಕಾಬಿಟ್ಟಿ ದುರುಪಯೋಗ ಮಾಡಲಾಗಿದೆ ಎಂದು ಲೋಕಾಯುಕ್ತ ನ್ಯಾಮಮೂರ್ತಿ ಬಿ.ಎಸ್. ಪಾಟೀಲ್ ಮುಂದೆ ದೂರು ನೀಡಲಾಗಿದೆ.
ಸಾಮಾಜಿಕ ಹೋರಾಟಗಾರ ಶಶಿಧರ್ ಶೆಟ್ಟಿ ಈ ಬಗ್ಗೆ ದೂರು ನೀಡಿದ್ದು, ಜನರ ದುಡ್ಡನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಬೇಕಾಬಿಟ್ಟಿ ಬಳಕೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಂಗಳೂರಿಗೆ ಬಂದಿದ್ದಾಗ ಈ ಕುರಿತು ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದರು. 3 ಕಿಮೀ ಫುಟ್ಪಾತ್ ಕೆಲಸಕ್ಕೆ 70 ಕೋಟಿ ರೂಪಾಯಿ ಬಿಲ್ ಮಾಡಿದ್ದನ್ನು ಪ್ರಶ್ನಿಸಿದ್ದರು. ಸ್ಮಾರ್ಟ್ ಸಿಟಿ ದುಡ್ಡಿನ ನೆಪದಲ್ಲಿ ಅಧಿಕಾರಿಗಳು ಹಣವನ್ನು ನೀರಿನಂತೆ ಖರ್ಚು ಮಾಡಿದ್ದಾರೆ. ಈ ಬಗ್ಗೆ ತನಿಖೆ ಮಾಡಬೇಕು ಎಂದು ಶಶಿಧರ್ ಶೆಟ್ಟಿ, ಲೋಕಾಯುಕ್ತರ ಗಮನಕ್ಕೆ ತಂದಿದ್ದಾರೆ.


ಇದಕ್ಕೆ ಪ್ರತಿಕ್ರಿಯಿಸಿದ ಲೋಕಾಯುಕ್ತ, ಯಾರ್ರೀ ಮಂಗಳೂರು ಪಾಲಿಕೆ ಕಮಿಷನರ್. ಏನ್ರೀ ನಿಮ್ಮ ಗಮನಕ್ಕೆ ಬಂದಿಲ್ವಾ ಇದು. ಈ ಬಗ್ಗೆ ರಿಪೋರ್ಟ್ ಕೊಡಿ ಎಂದು ಹೇಳಿ ಫೈಲನ್ನು ದಾಟಿಸಿದ್ದಾರೆ. ಮಂಗಳೂರಿನ ಜಿಪಂ ಸಭಾಂಗಣದಲ್ಲಿ ಲೋಕಾಯುಕ್ತರು ಅಪರೂಪಕ್ಕೆ ಎಂಬಂತೆ ಎಲ್ಲ ಅಧಿಕಾರಿಗಳ ಸಮ್ಮುಖದಲ್ಲಿಯೇ ಸಾರ್ವಜನಿಕರ ದೂರು ಸ್ವೀಕಾರ ಮಾಡಿದ್ದಾರೆ. ಸಾರ್ವಜನಿಕರು ಹಲವಾರು ರೀತಿಯ ದೂರುಗಳನ್ನು ಲೋಕಾಯುಕ್ತಕ್ಕೆ ನೀಡಿದ್ದಾರೆ.


ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಲೋಕಾಯುಕ್ತ ಪಾಟೀಲ್, ನಾವು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದೇವೆ. ಬಹಳಷ್ಟು ಅಧಿಕಾರಿಗಳ ಬಗ್ಗೆ ದೂರು, ಅಸಮಾಧಾನ ಕೇಳಿಬಂದಿದೆ. ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಕೆಲವು ಸೂಚನೆಗಳನ್ನು ನೀಡಿದ್ದೇನೆ, ದೂರುಗಳನ್ನು ಪರಿಶೀಲಿಸಿ ಅಗತ್ಯ ಬಿದ್ದಲ್ಲಿ ಪ್ರಕರಣ ದಾಖಲಿಸಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. ಪ್ರಕರಣ ಇತ್ಯರ್ಥವಾಗದೆ ಉಳಿಯುವುದರ ಬಗ್ಗೆ ಕೇಳಿದ ಪ್ರಶ್ನೆಗೆ, ನಾವು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಆದರೆ ವರ್ಷಕ್ಕೆ 5 ಸಾವಿರದಿಂದ 8 ಸಾವಿರದ ವರೆಗೆ ಸಾರ್ವಜನಿಕರಿಂದ ವಿವಿಧ ರೀತಿಯ ದೂರುಗಳು ಬರುತ್ತಿದ್ದು ಎಲ್ಲವನ್ನೂ ಆಲಿಸುತ್ತಿದ್ದು ನ್ಯಾಯ ದೊರಕಿಸಲು ಶ್ರಮಿಸುತ್ತೇವೆ ಎಂದರು.
ಇಲಾಖೆಯಲ್ಲಿ 700ರಷ್ಟು ಹುದ್ದೆ ಖಾಲಿ ಇದೆ ಎಂದು ಹೇಳಿದ ಅವರು, ಆ ಕಾರಣದಿಂದಲೂ ವಿಳಂಬ ಆಗುತ್ತಿದೆ ಎಂಬುದನ್ನು ಒಪ್ಪಿಕೊಂಡರು. ದಾಖಲಾದ ಪ್ರಕರಣಗಳಲ್ಲಿ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ತನಿಖಾಧಿಕಾರಿಗಳ ಜೊತೆಗೆ ಸಂಪರ್ಕದಲ್ಲಿರುತ್ತೇವೆ. ಸಾಕ್ಷ್ಯ ಸಂಗ್ರಹ, ಸಾಕ್ಷಿಗಳನ್ನು ಜೊತೆಗಿಟ್ಟು ಶಿಕ್ಷೆಯಾಗಲು ಶ್ರಮಿಸುವುದು ಸೇರಿದಂತೆ ನಾವು ಗರಿಷ್ಠ ಶಿಕ್ಷೆಗೆ ಪ್ರಯತ್ನ ಪಡುತ್ತೇವೆ ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್, ಎಸ್ಪಿ ಸಿಬಿ ರಿಷ್ಯಂತ್ ಉಪಸ್ಥಿತರಿದ್ದರು.
Lokayukta B S Patil addresses public grievances in Mangalore. Lokayukta Justice B S Patil held a meeting at the at the zilla panchayat with district officers and the public to address their grievances on Saturday December 16
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 10:55 am
HK News Staffer
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm