ಬ್ರೇಕಿಂಗ್ ನ್ಯೂಸ್
17-12-23 03:19 pm Mangalore Correspondent ಕರಾವಳಿ
ಉಳ್ಳಾಲ, ಡಿ.17: ಮಾಲಿಗಪ್ಪುರಂ ಮಳಯಾಲಂ ಹಿಟ್ ಚಿತ್ರದ ಬಾಲನಟಿ ಬೇಬಿ ದೇವಾನಂದ್ ಅವರು ಕಲ್ಲಾಪು ಬುರ್ದುಗೋಳಿಯ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ತನ್ನ ನಟನೆಯ ಹೊಸ ಚಿತ್ರ "ಗುಳಿಗನ್" ಯಶಸ್ಸಿಗೆ ಪ್ರಾರ್ಥಿಸಿದರು.
ಸೋಮೇಶ್ವರದಲ್ಲಿ ನಡೆದ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಬೇಬಿ ದೇವಾನಂದ ಅವರು ತಂದೆ ಜಿಬಿನ್ ಜೊತೆ ಬುರ್ದುಗೋಳಿ ಕ್ಷೇತ್ರಕ್ಕೆ ಭೇಟಿ ನೀಡಿದರು. ತನ್ನ ಹನ್ನೊಂದನೇ ವಯಸ್ಸಿನಲ್ಲಿ ದೇಶ, ವಿದೇಶಗಳಲ್ಲಿ ನಡೆದ ಚಿತ್ರೀಕರಣಗಳಲ್ಲಿ ನಟಿಸಿರುವ ಕೀರ್ತಿ ಬೇಬಿ ದೇವನಂದರದ್ದು.


ಸುಮಾರು 14 ಚಿತ್ರಗಳಲ್ಲಿ ಅಭಿನಯಿಸಿರುವ ಬೇಬಿ ದೇವಾನಂದ್ ಕಳೆದ ವರುಷ ತೆರೆ ಕಂಡ"ಮಾಲಿಗಪ್ಪುರಂ" ಎಂಬ ಅಯ್ಯಪ್ಪ ಭಕ್ತಿ ಪ್ರಧಾನ ಚಿತ್ರದಲ್ಲಿ ಅದ್ಭುತವಾಗಿ ನಟಿಸಿದ್ದು ಚಿತ್ರವು ಸೂಪರ್ ಹಿಟ್ ಆಗಿತ್ತು. ದೇವಾನಂದ್ ಸಾಲು, ಸಾಲು ಚಿತ್ರಗಳಲ್ಲಿ ಅಭಿನಯಿಸಲು ಆಫರ್ ಬಂದಿದ್ದು ಆಕೆಯ ನಟನೆಯ ಮುಂದಿನ ಚಿತ್ರ "ಗುಳಿಗನ್" ಯಶಸ್ಸಿಗಾಗಿ ಕರಾವಳಿಯ ಕಾರಣೀಕ ಶಕ್ತಿಗಳಾದ ಕೊರಗಜ್ಜ- ಗುಳಿಗ ದೈವಗಳಲ್ಲಿ ಬಾಲನಟಿ ಪ್ರಾರ್ಥನೆ ಸಲ್ಲಿಸಿದಳು. ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಗಳು ಬಾಲನಟಿಯನ್ನು ಸನ್ಮಾನಿಸಿ ಗೌರವಿಸಿದರು.ಬುರ್ದುಗೋಳಿ ಕ್ಷೇತ್ರದ ಕುರಿತಾಗಿ ಪೂಜಾ ಸನಿಲ್ ಕಂಠದಾನದಲ್ಲಿ ರಚನೆಯಾದ ನೂತನ ಭಕ್ತಿಗೀತೆಯ ಧ್ವನಿ ಸುರುಳಿಯನ್ನ ಈ ವೇಳೆ ಬಿಡುಗಡೆ ಮಾಡಲಾಯಿತು. ಹಾಲುಗೆನ್ನೆಯ ಮುದ್ದಾದ ಮಲಯಾಳಿ ಬಾಲ ನಟಿಯ ಜತೆಗೆ ಸ್ಥಳೀಯರು ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದರು.


ಬುರ್ದುಗೋಳಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ , ಗೌರವ ಸಲಹೆಗಾರರಾದ ಚಂದ್ರಹಾಸ್ ಪಂಡಿತ್ ಹೌಸ್, ಗೌರವ ಅಧ್ಯಕ್ಷರಾದ ಸಂಜೀವ ಭಂಡಾರಿ, ಪ್ರಮುಖರಾದ ದೇವದಾಸ್ ಕಾಯಂಗಲ, ನವೀನ್ ಕಾಯಂಗಳ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.
Malikappuram Malayalam movie child actress Kallu Deva Nandha visits Kallapu Burdugoli Koragajja Temple at Ullal in Mangalore
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm