ಬ್ರೇಕಿಂಗ್ ನ್ಯೂಸ್
18-12-23 06:13 pm Mangalore Correspondent ಕರಾವಳಿ
ಮಂಗಳೂರು, ಡಿ.18: ಕರ್ನಾಟಕದ ಗಡಿಭಾಗ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ರಥೋತ್ಸವದೊಂದಿಗೆ ಸಂಪನ್ನಗೊಂಡಿದೆ. ದೇವಳದ ರಥಬೀದಿಯಲ್ಲಿ ಸಹಸ್ರಾರು ಭಗವತ್ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು.
ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದು ಲಕ್ಷಾಂತರ ಭಕ್ತರು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.


ಮುಂಜಾನೆ ಶ್ರೀ ದೇವಳದಲ್ಲಿ ಪಂಚಾಮೃತ , ಕ್ಷೀರಾಭಿಷೇಕ, ಶತ ಕಲಶಾಭಿಷೇಕಗಳು ದೇವಳದಲ್ಲಿ ನೆರವೇರಿದವು. ಬಳಿಕ ಸಾಯಂಕಾಲ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕ್ಕಿಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು. ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಚಂಪಾ ಷಷ್ಠಿ ಆಚರಿಸಿದರು. ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.
ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ, ಕುಂದಾಪುರ, ಪುತ್ತೂರು , ಹಾಸನ, ಮಡಿಕೇರಿ, ಮುಂಬೈ, ಬೆಂಗಳೂರು, ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಚಿತ್ರ : ಮಂಜು ನೀರೇಶ್ವಾಲ್ಯ
The Champasashti festival at Manjeswara Srimad Anantheshwara Temple, popularly known as the Temple of 18pet in Kasargod, bordering Karnataka, concluded with a chariot festival. The rathotsava celebrations were held in the presence of thousands of devotees of Lord Bhagavad.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm