ಬ್ರೇಕಿಂಗ್ ನ್ಯೂಸ್
19-12-23 11:13 am Mangalore Correspondent ಕರಾವಳಿ
ಉಳ್ಳಾಲ, ಡಿ.19: ಸೋಮೇಶ್ವರ ಕಡಲ ತೀರದಲ್ಲಿ ಇಂದು ಬೆಳಗ್ಗೆ ಮಹೇಶ್ ಟ್ರಾವೆಲ್ಸ್ ಬಸ್ ಚಾಲಕನ ಮೃತದೇಹ ಸಿಕ್ಕಿದ್ದು, ರುದ್ರಪಾದೆಯಿಂದ ಜಿಗಿದು ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ಕೋಟೆಕಾರು ಪಟ್ಟಣದ ಕೊಂಡಾಣ, ವಿದ್ಯಾನಗರ ನಿವಾಸಿ ಜಗದೀಶ್ ಶೆಟ್ಟಿ(38)ಮೃತ ವ್ಯಕ್ತಿ. ಜಗದೀಶ್ ಅವರು 43 ರೂಟ್ ಸಂಖ್ಯೆಯ ಮಂಗಳೂರು- ತಲಪಾಡಿಯ ನಡುವೆ ಓಡಾಟ ನಡೆಸುತ್ತಿದ್ದ ಖಾಸಗಿ ಬಸ್ ಮಹೇಶ್ ಟ್ರಾವೆಲ್ಸ್ ನಲ್ಲಿ ಚಾಲಕರಾಗಿದ್ದರು. ಜಗದೀಶ್ ನಿನ್ನೆ ರಾತ್ರಿ ಮನೆಗೆ ತೆರಳದೆ ನಾಪತ್ತೆಯಾಗಿದ್ದರು.
ಇಂದು ಬೆಳಗ್ಗೆ ಜಗದೀಶ್ ಅವರ ಮೃತದೇಹ ಸೋಮೇಶ್ವರ ಕಡಲಲ್ಲಿ ತೇಲುತ್ತಿದ್ದು ಸ್ಥಳೀಯ ಮೀನುಗಾರರು ಅದನ್ನ ಎಳೆದು ದಡಕ್ಕೆ ಹಾಕಿದ್ದಾರೆ. ರುದ್ರಪಾದೆಯಲ್ಲಿ ಜಗದೀಶ್ ಅವರು ಧರಿಸಿದ್ದ ಚಪ್ಪಲ್, ಮೊಬೈಲ್, ಬೈಕ್ ಕೀ ಗೊಂಚಲು ದೊರಕಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮಹೇಶ್ ಟ್ರಾವೆಲ್ಸ್ ಬಸ್ಸು ಮಾಲಕ ಪ್ರಕಾಶ್ ಶೇಖ ಕೂಡ ಕೆಲ ತಿಂಗಳ ಹಿಂದಷ್ಟೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಮಹೇಶ್ ಟ್ರಾವೆಲ್ಸಲ್ಲೇ ಕ್ಲೀನರ್, ನಿರ್ವಾಹಕ ವೃತ್ತಿ ಮಾಡಿ ಕಳೆದ ಹಲವು ವರುಷಗಳಿಂದ ಚಾಲಕರಾಗಿದ್ದ ಜಗದೀಶ್ ಆತ್ಮಹತ್ಯೆಗೈದಿರುವುದು ಅವರ ಮನೆ ಮಂದಿ, ಸ್ನೇಹಿತರನ್ನ ಆಘಾತಗೊಳಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜಗದೀಶ್ ತಂದೆ ವೆಂಕಪ್ಪ ಶೆಟ್ಟಿ ಅಸೌಖ್ಯದಿಂದ ಬಳಲುತ್ತಿದ್ದು ಮೂರು ದಿನಗಳ ಹಿಂದೆ ದೇರಳಕಟ್ಟೆಯ ಕೆ.ಎಸ್ .ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅದೇ ಆಸ್ಪತ್ರೆಗೆ ಮಗನ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಮೃತ ಜಗದೀಶ್ ಅವಿವಾಹಿತರಾಗಿದ್ದು ತಾಯಿ, ತಂದೆ ಇಬ್ಬರು ಅಣ್ಣಂದಿರನ್ನ ಅಗಲಿದ್ದಾರೆ.
Mahesh bus Travels driver commits suicide at Someshwar Beach in Mangalore. The deceased has been identifed as Jagadish Shetty (48). Ullal police are at the spot.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 06:38 pm
Giridhar Shetty, Mangaluru Staffer
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm