ಬ್ರೇಕಿಂಗ್ ನ್ಯೂಸ್
19-12-23 11:13 am Mangalore Correspondent ಕರಾವಳಿ
ಉಳ್ಳಾಲ, ಡಿ.19: ಸೋಮೇಶ್ವರ ಕಡಲ ತೀರದಲ್ಲಿ ಇಂದು ಬೆಳಗ್ಗೆ ಮಹೇಶ್ ಟ್ರಾವೆಲ್ಸ್ ಬಸ್ ಚಾಲಕನ ಮೃತದೇಹ ಸಿಕ್ಕಿದ್ದು, ರುದ್ರಪಾದೆಯಿಂದ ಜಿಗಿದು ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ಕೋಟೆಕಾರು ಪಟ್ಟಣದ ಕೊಂಡಾಣ, ವಿದ್ಯಾನಗರ ನಿವಾಸಿ ಜಗದೀಶ್ ಶೆಟ್ಟಿ(38)ಮೃತ ವ್ಯಕ್ತಿ. ಜಗದೀಶ್ ಅವರು 43 ರೂಟ್ ಸಂಖ್ಯೆಯ ಮಂಗಳೂರು- ತಲಪಾಡಿಯ ನಡುವೆ ಓಡಾಟ ನಡೆಸುತ್ತಿದ್ದ ಖಾಸಗಿ ಬಸ್ ಮಹೇಶ್ ಟ್ರಾವೆಲ್ಸ್ ನಲ್ಲಿ ಚಾಲಕರಾಗಿದ್ದರು. ಜಗದೀಶ್ ನಿನ್ನೆ ರಾತ್ರಿ ಮನೆಗೆ ತೆರಳದೆ ನಾಪತ್ತೆಯಾಗಿದ್ದರು.
ಇಂದು ಬೆಳಗ್ಗೆ ಜಗದೀಶ್ ಅವರ ಮೃತದೇಹ ಸೋಮೇಶ್ವರ ಕಡಲಲ್ಲಿ ತೇಲುತ್ತಿದ್ದು ಸ್ಥಳೀಯ ಮೀನುಗಾರರು ಅದನ್ನ ಎಳೆದು ದಡಕ್ಕೆ ಹಾಕಿದ್ದಾರೆ. ರುದ್ರಪಾದೆಯಲ್ಲಿ ಜಗದೀಶ್ ಅವರು ಧರಿಸಿದ್ದ ಚಪ್ಪಲ್, ಮೊಬೈಲ್, ಬೈಕ್ ಕೀ ಗೊಂಚಲು ದೊರಕಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮಹೇಶ್ ಟ್ರಾವೆಲ್ಸ್ ಬಸ್ಸು ಮಾಲಕ ಪ್ರಕಾಶ್ ಶೇಖ ಕೂಡ ಕೆಲ ತಿಂಗಳ ಹಿಂದಷ್ಟೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಮಹೇಶ್ ಟ್ರಾವೆಲ್ಸಲ್ಲೇ ಕ್ಲೀನರ್, ನಿರ್ವಾಹಕ ವೃತ್ತಿ ಮಾಡಿ ಕಳೆದ ಹಲವು ವರುಷಗಳಿಂದ ಚಾಲಕರಾಗಿದ್ದ ಜಗದೀಶ್ ಆತ್ಮಹತ್ಯೆಗೈದಿರುವುದು ಅವರ ಮನೆ ಮಂದಿ, ಸ್ನೇಹಿತರನ್ನ ಆಘಾತಗೊಳಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜಗದೀಶ್ ತಂದೆ ವೆಂಕಪ್ಪ ಶೆಟ್ಟಿ ಅಸೌಖ್ಯದಿಂದ ಬಳಲುತ್ತಿದ್ದು ಮೂರು ದಿನಗಳ ಹಿಂದೆ ದೇರಳಕಟ್ಟೆಯ ಕೆ.ಎಸ್ .ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅದೇ ಆಸ್ಪತ್ರೆಗೆ ಮಗನ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಮೃತ ಜಗದೀಶ್ ಅವಿವಾಹಿತರಾಗಿದ್ದು ತಾಯಿ, ತಂದೆ ಇಬ್ಬರು ಅಣ್ಣಂದಿರನ್ನ ಅಗಲಿದ್ದಾರೆ.
Mahesh bus Travels driver commits suicide at Someshwar Beach in Mangalore. The deceased has been identifed as Jagadish Shetty (48). Ullal police are at the spot.
29-05-25 03:34 pm
HK News Desk
CM Siddaramaiah, B K Hariprasad, Mangalore Mu...
29-05-25 02:43 pm
COVID, African Swine Fever Bagalkote: ಕೊರೋನಾ...
29-05-25 02:19 pm
Ma Saleem, DG, IGP, Court: ಡಿಜಿ ಎಂ.ಎ.ಸಲೀಂ ಪ್ರ...
28-05-25 07:06 pm
ST Somasekhar: ಬಿಜೆಪಿಯ 10 ರಿಂದ 12 ಸ್ಥಾನ ಖಾಲಿ...
27-05-25 11:17 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
28-05-25 11:16 pm
Mangalore Correspondent
Mangalore Bantwal Murder, SDPI, Congress resi...
28-05-25 10:41 pm
Bantwal Abdul Raheem Murder Case, ADGP Hitend...
28-05-25 08:04 pm
Bantwal Rahiman Murder, Puttur, Ashraf Kalega...
28-05-25 07:44 pm
Krishaveni Mines and Geology, Arrest, Mangalo...
28-05-25 05:27 pm
29-05-25 06:38 pm
Mangaluru Correspondent
Uppinangady, Blackmail, Goat Purchase, Puttur...
29-05-25 02:16 pm
Karkala, Chikkamagaluru: ನವಜಾತ ಶಿಶುವನ್ನು ಕಾರ್...
29-05-25 01:13 pm
Garuda Gang, Mangalore crime, Karwar police:...
29-05-25 12:44 pm
Mangalore, Bantwal Murder, Attack, Kambodi: ಬ...
27-05-25 05:29 pm