ಬ್ರೇಕಿಂಗ್ ನ್ಯೂಸ್
18-11-20 02:26 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 18 : ಮರಾಠ ಅಭಿವೃದ್ಧಿ ಪ್ರಾಧಿಕಾರ ವಿಚಾರದಲ್ಲಿ ಪರ - ವಿರೋದ ಕೇಳಿಬರುತ್ತಿದ್ದಂತೆ ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ವಕ್ತಾರ ಐವನ್ ಡಿಸೋಜಾ ಕೌಂಟರ್ ಹೊಡೆದಿದ್ದಾರೆ.
ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳುತ್ತಾ ಬಂದಿರಿ. 50 ಕೋಟಿ ಮೀಸಲಿಡುವ ಮಾತನ್ನೂ ಆಡಿದ್ರಿ. ಆದರೆ, ಕ್ರೈಸ್ತ ನಿಗಮ ಜಾರಿಗೊಳಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ ಐವನ್ ಡಿಸೋಜ, ಕ್ರೈಸ್ತರಲ್ಲಿಯೂ ಬಡ ಜನರಿದ್ದಾರೆ. ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ನಮ್ಮ ಒತ್ತಾಯವೂ ಇತ್ತು. ಆದರೆ ಸರಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ಕಿಡಿಕಾರಿದರು.
ನಿಗಮ ಸ್ಥಾಪನೆ ಮಾಡದಿದ್ದರೆ ರಾಜ್ಯದ ಕ್ರೈಸ್ತರನ್ನ ಹೋರಾಟಕ್ಕೆ ಧುಮುಕುವಂತೆ ಮಾಡುತ್ತೇವೆ. ಜನರು ಬೀದಿಗೆ ಬಂದರೆ ಸರಕಾರವೇ ನೇರ ಹೊಣೆ. ಕ್ರೈಸ್ತರನ್ನ ಅಂಡರ್ ಎಸ್ಟಿಮೇಟ್ ಮಾಡುವುದು ಬೇಡ. ಕ್ರೈಸ್ತ ಸಮುದಾಯದ ಮೌನ, ಅವರ ವೀಕ್ನೆಸ್ ಅಲ್ಲ. ಬಿಷಪ್ ಸನ್ಮಾನ ಸ್ವೀಕರಿಸಿ ಹೋದ ಸಿಎಂ, ನಿಗಮಕ್ಕೆ ಅನುಮೋದನೆ ನೀಡುವುದಾಗಿ ಹೇಳಿದ್ದರು. ಆದರೆ ಆನಂತರ ಯಾಕಾಗಿ ರದ್ದು ಮಾಡಿದ್ದೀರಿ? ಇದರ ಹಿಂದಿನ ಅಜೆಂಡಾ ಏನು ? ತಕ್ಷಣವೇ ಸಿಎಂ ಇದಕ್ಕೆ ಉತ್ತರ ಕೊಡಬೇಕು ಎಂದು ಐವಾನ್ ಒತ್ತಾಯಿಸಿದರು.
55 ಕೋಟಿ ನಿಗಮಕ್ಕಾಗಿ ಇಟ್ಟಿದ್ದು ಏನು ಮಾಡಿದ್ದೀರಿ ಎಂದು ಕೇಳಿದ ಐವನ್ ಡಿಸೋಜ, 2008 ರಲ್ಲಿ ಚರ್ಚ್ ದಾಳಿಯಾದಾಗಲೂ ಕ್ರೈಸ್ತರು ತಾಳ್ಮೆ ವಹಿಸಿದ್ದರು. ಆದರೆ ಸರಕಾರ ಕ್ರೈಸ್ತರಿಗಾಗಿ ಚಿಕ್ಕಾಸು ಖರ್ಚು ಮಾಡಿಲ್ಲ. ನಿಗಮ ಕೊಟ್ಟಿದ್ದೇವೆ ಅಂತಾ ಜಾಹೀರಾತು ನೀಡಿದ್ದರು. ಆದರೆ, ಅನುಷ್ಠಾನಕ್ಕೆ ತಂದಿಲ್ಲ. ಕ್ರೈಸ್ತರನ್ನ ಮಂಗಗಳು ಎಂದು ಭಾವಿಸಿಕೊಂಡಿದ್ದಾರೆಯೇ ಸಿಎಂ ಯಡಿಯೂರಪ್ಪ ಎಂದ ಐವನ್ ಡಿಸೋಜಾ ಕಿಡಿಕಾರಿದ್ದಾರೆ.
Video:
Former MLC Ivan D'Souza urged CM BS Yediyurappa to reinstate Christian Development Corporation and asked for a justification to the community and reason behind rejecting the corporation.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm