ಬ್ರೇಕಿಂಗ್ ನ್ಯೂಸ್
20-12-23 08:13 pm Mangalore Correspondent ಕರಾವಳಿ
ಮಂಗಳೂರು, ಡಿ.20: ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫುಡ್ ಇನ್ನಿತರ ಡೆಲಿವರಿ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ಉಚಿತ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ಇದಕ್ಕಾಗಿ ನೋಂದಾಯಿಸಬಹುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿ ಅಥವಾ ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದೆ.
ಈ ಯೋಜನೆ ಸಂಪೂರ್ಣ ಉಚಿತವಾಗಿದ್ದು ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇರುವುದಿಲ್ಲ. ಸ್ವಿಗ್ಗಿ, ಜೊಮಾಟೋ ಮಾದರಿಯ ಸಂಸ್ಥೆಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಪೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರಿಗೆ ಈ ಯೋಜನೆ ಲಭ್ಯವಿದೆ.
ಯೋಜನೆ ಸೌಲಭ್ಯಗಳು
18ರಿಂದ 60 ವರ್ಷದೊಳಗಿನ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ಮೂಲಕ ತಮ್ಮ ಹೆಸರು ನೋಂದಾಯಿಸಬೇಕು. ಆದರೆ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು ಹಾಗೂ ಕರ್ನಾಟಕದಲ್ಲಿ ಡೆಲಿವರಿ ಕಾರ್ಯ ಮಾಡುತ್ತಿರುವವರಿಗೆ ಮಾತ್ರ ಅನ್ವಯಿಸುತ್ತದೆ. ಆಧಾರ್ ಸಂಖ್ಯೆ, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ, ವೇತನ ಚೀಟಿ, ವೇತನ ಪಡೆದ ಬ್ಯಾಂಕ್ ಪಾಸ್ ಬುಕ್ ಹಾಗೂ ಇ-ಶ್ರಮ್ ಕಾರ್ಡ್ ಈ ಎಲ್ಲಾ ದಾಖಲೆಗಳನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ, ಕಾರ್ಮಿಕ ನಿರೀಕ್ಷಕರ ಕಚೇರಿ ಅಥವಾ ದೂ.ಸಂಖ್ಯೆ: 0824-2435343, 0824-2433132 ಸಂಪರ್ಕಿಸುವಂತೆ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
For the first time in the country, a free insurance scheme has been launched for food and other delivery workers working in Karnataka. All eligible gig workers can register for the same on the Seva Sindhu portal. The insurance facility will also be applicable for accidents occurring while on duty or not.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 06:23 pm
HK News Staffer
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm