ಬ್ರೇಕಿಂಗ್ ನ್ಯೂಸ್
22-12-23 02:35 pm Udupi Correspondent ಕರಾವಳಿ
ಉಡುಪಿ, ಡಿ.22: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರು ಬೇರೆ ಬೋಟ್ ಮೂಲಕ ರಕ್ಷಿಸಲ್ಪಟ್ಟಿದ್ದಾರೆ.
ಕಡೆಕಾರು ಶ್ರೀ ನಾರಾಯಣ ಎಂಬ ಹೆಸರಿನ ಬೋಟ್ ಡಿ.12ರಂದು ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಡಿಸೆಂಬರ್ 19 ರಂದು ಹಿಂತಿರುಗಿ ಬರುತ್ತಿದ್ದಾಗ ಮಲ್ಪೆಯಿಂದ 26 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ದೋಣಿ ಮುಳುಗಡೆಗೊಂಡಿದೆ.
ಬೆಳಗ್ಗೆ 6.30ರ ಸುಮಾರಿಗೆ ನೀರಿನಡಿಯಲ್ಲಿ ಬಂಡೆ ಕಲ್ಲು ದೋಣಿಯ ತಳಕ್ಕೆ ಸ್ಪರ್ಶಿಸಿ ತಳಭಾಗ ಒಡೆದು ಹೋಗಿದ್ದು ನೀರು ನುಗ್ಗಲು ಆರಂಭಿಸಿತ್ತು. ಸಿಬ್ಬಂದಿ ಕೂಡಲೇ ವೈರ್ ಲೆಸ್ ಸಂಪರ್ಕ ಬಳಸಿ ಇತರೆ ಬೋಟ್ ಗಳಿಗೆ ಸಂದೇಶ ರವಾನಿಸಿದ್ದಾರೆ. ಮೂಕಾಂಬಿಕಾ ಹೆಸರಿನ ದೋಣಿಯಲ್ಲಿದ್ದವರು ಸ್ಥಳಕ್ಕೆ ಧಾವಿಸಿದ್ದು ಮುಳುಗುತ್ತಿರುವ ದೋಣಿಯನ್ನು ಕಟ್ಟಿ ದಡಕ್ಕೆ ಒಯ್ಯಲು ಪ್ರಯತ್ನಿಸಿದ್ದಾರೆ, ಆದರೆ ನೀರಿನ ಅಬ್ಬರ ಜಾಸ್ತಿಯಿದ್ದುದರಿಂದ ಸಾಧ್ಯವಾಗಲಿಲ್ಲ. 8 ಗಂಟೆ ವೇಳೆಗೆ ದೋಣಿ ಸಂಪೂರ್ಣ ಮುಳುಗಡೆಯಾಗಿತ್ತು.
ಅದೃಷ್ಟವಶಾತ್ ಮೂಕಾಂಬಿಕಾ ದೋಣಿಯ ಮೂಲಕ ಮುಳುಗಡೆಯಾದ ಬೋಟಿನಲ್ಲಿದ್ದ ಮೀನುಗಾರರನ್ನು ಮರಳಿ ದಡಕ್ಕೆ ಕರೆತರಲಾಯಿತು. ಘಟನೆಯಿಂದ ಸುಮಾರು 18 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
Eight fishermen who were on board a deep-sea fishing boat that capsized off Malpe coast in Udupi district were rescued by fishermen from another boat, police said.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 06:38 pm
Giridhar Shetty, Mangaluru Staffer
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm